ADVERTISEMENT
Sunday, May 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಫೇಲ್ ಜೆಟ್‌ಗಳನ್ನು ದೇಶಕ್ಕೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತದ ಐಎಎಫ್ ಅಧಿಕಾರಿ

admin by admin
July 30, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Share on FacebookShare on TwitterShare on WhatsappShare on Telegram

ರಫೇಲ್ ಜೆಟ್‌ಗಳನ್ನು ದೇಶಕ್ಕೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತದ ಐಎಎಫ್ ಅಧಿಕಾರಿ

ಹೊಸದಿಲ್ಲಿ, ಜುಲೈ 30: ಜುಲೈ 27 ರಂದು ಫ್ರಾನ್ಸ್‌ನಿಂದ ಹೊರಟ ಬಹುನಿರೀಕ್ಷಿತ ಐದು ರಾಫೆಲ್ ಫೈಟರ್ ಜೆಟ್‌ಗಳ ಮೊದಲ ಬ್ಯಾಚ್ ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಭಾರತವನ್ನು ತಲುಪಿದೆ.
ವಿಶ್ವದ ಅತ್ಯುತ್ತಮ ಫೈಟರ್ ಜೆಟ್‌ಗಳ ಆಗಮನದ ಕುರಿತಾದ ಐತಿಹಾಸಿಕ ಕ್ಷಣದಲ್ಲಿ, ಭಾರತೀಯ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಹಿಲಾಲ್ ಅಹ್ಮದ್ ರಾಥರ್ ನಿರ್ವಹಿಸಿದ ಪ್ರಮುಖ ಪಾತ್ರದ ಬಗ್ಗೆ ಗಮನಸೆಳೆದಿದ್ದಾರೆ. ರಫೇಲ್ ಜೆಟ್‌ಗಳನ್ನು ತ್ವರಿತವಾಗಿ ತಲುಪಿಸಲು ಕಾರಣಕರ್ತರಾಗಿರುವ ವ್ಯಕ್ತಿ ಏರ್ ಕಮೋಡೋರ್ ಹಿಲಾಲ್ ಅಹ್ಮದ್ ರಾಥರ್, ಅವರು ಪ್ರಸ್ತುತ ಫ್ರಾನ್ಸ್‌ಗೆ ಏರ್ ಅಟ್ಯಾಚ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

Related posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

May 17, 2026
ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

May 17, 2026


59,000 ಕೋಟಿ ರೂ.ಗಳ ಮೌಲ್ಯದ 36 ರಾಫೆಲ್ ಜೆಟ್‌ಗಳಿಗೆ ಭಾರತ ಮತ್ತು ಫ್ರಾನ್ಸ್ 2016 ರ ಸೆಪ್ಟೆಂಬರ್‌ನಲ್ಲಿ ಅಂತರ್ ಸರ್ಕಾರಿ ಒಪ್ಪಂದಕ್ಕೆ ಸಹಿ ಹಾಕಿದ್ದವು. ಭಾರತ ಖರೀದಿಸಿದ ಮೊದಲ ಬ್ಯಾಚ್ ರಫೇಲ್ ಫೈಟರ್ ಜೆಟ್‌ಗಳ ಆರಂಭಿಕ ವಿತರಣೆಯನ್ನು ಪಡೆಯಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 2019 ರ ಅಕ್ಟೋಬರ್ 9 ರಂದು ಮೆರಿಗ್ನಾಕ್ ವಾಯುನೆಲೆಗೆ ಹೋಗಿದ್ದರು.

ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಮಧ್ಯಮ ವರ್ಗದಲ್ಲಿ ಜನಿಸಿದ ಹಿಲಾಲ್ ಅವರ ತಂದೆ ದಿವಂಗತ ಮೊಹಮ್ಮದ್ ಅಬ್ದುಲ್ಲಾ ಅವರು ಜೆ & ಕೆ ಪೊಲೀಸ್ ಇಲಾಖೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿವೈ ಎಸ್‌ಪಿ) ನಿವೃತ್ತರಾದರು. ಅವರಿಗೆ ಮೂವರು ಸಹೋದರಿಯರಿದ್ದು, ಅವರು ಹೆತ್ತವರ ಏಕೈಕ ಪುತ್ರನಾಗಿದ್ದಾರೆ.‌

ಹಿಲಾಲ್ ಅವರನ್ನು ಡಿಸೆಂಬರ್ 17, 1988 ರಂದು ಭಾರತೀಯ ವಾಯುಸೇನೆಯಲ್ಲಿ ಫೈಟರ್ ಪೈಲಟ್ ಆಗಿ ನಿಯೋಜಿಸಲಾಯಿತು. ಅವರು 1993 ರಲ್ಲಿ ಫ್ಲೈಟ್ ಲೆಫ್ಟಿನೆಂಟ್, 2004 ರಲ್ಲಿ ವಿಂಗ್ ಕಮಾಂಡರ್, 2016 ರಲ್ಲಿ ಗ್ರೂಪ್ ಕ್ಯಾಪ್ಟನ್ ಮತ್ತು 2019 ರಲ್ಲಿ ಏರ್ ಕಮೋಡೋರ್ ಆದರು. ಅವರು ರಕ್ಷಣಾ ಸೇವೆಗಳ ಸಿಬ್ಬಂದಿ ಕಾಲೇಜಿನಿಂದ (ಡಿಎಸ್ಎಸ್ಸಿ) ಪದವಿ ಪಡೆದರು ಮತ್ತು ಏರ್ ವಾರ್ ಕಾಲೇಜಿನಿಂದ (ಯುಎಸ್ಎ) ಪದವಿ ಪಡೆದರು. ವಾಯುಸೇನಾ ಪದಕ ಮತ್ತು ವಿಶೀಷ್ಠ ಸೇವಾ ಪದಕವನ್ನು ಪಡೆದ ಹಿಲಾಲ್ ವಿವಿಧ ವಿಮಾನಗಳಲ್ಲಿ 3,000 ಅಪಘಾತ-ಮುಕ್ತ ಹಾರಾಟ ನಡೆಸಿದ್ದಾರೆ.

ಕಾಶ್ಮೀರದ ಅನಂತ್‌ನಾಗ್ ಮೂಲದ ಭಾರತೀಯ ವಾಯುಪಡೆಯ ಅಧಿಕಾರಿ ರಫೇಲ್ ಜೆಟ್‌ಗಳನ್ನು ದೇಶಕ್ಕೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ನಿವೃತ್ತ ಡಿಎಸ್ಪಿಯ ಮಗ ಕಳೆದ ಕೆಲವು ವರ್ಷಗಳಿಂದ ಭಾರತದ ಪರಿಸ್ಥಿತಿಗಳಿಗೆ ತಕ್ಕಂತೆ ಯುದ್ಧ ವಿಮಾನವನ್ನು ಶಸ್ತ್ರಸಜ್ಜಿತಗೊಳಿಸಿದ್ದಾರೆ. 13 ಭಾರತೀಯ ವಿಶೇಷಣಗಳ ಶಸ್ತ್ರಾಸ್ತ್ರಗಳೊಂದಿಗೆ ರಫೇಲ್ ವಿಮಾನವನ್ನು ಹೊಂದಿಸಲು ಯೋಜನಾ ನಿರ್ವಹಣಾ ತಂಡಕ್ಕೆ ಸಹಾಯ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.
ರಾಥರ್ ಜೊತೆಗೆ, ಫ್ರಾನ್ಸ್‌ನ ಭಾರತೀಯ ರಾಯಭಾರಿ ಜಾವೇದ್ ಅಶ್ರಫ್ ಕೂಡ ರಫೇಲ್ ಜೆಟ್‌ಗಳನ್ನು ಭಾರತಕ್ಕೆ ತಲುಪಿಸುವುದನ್ನು ಖಾತ್ರಿಪಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಫ್ರಾನ್ಸ್‌ನಿಂದ ಹೊರಟ ಐದು ಯುದ್ಧ ಜೆಟ್‌ ಗಳು ಬುಧವಾರ ಅಂಬಾಲಾ ವಾಯುಪಡೆಯ ನಿಲ್ದಾಣಕ್ಕೆ ಬಂದಿಳಿದಿವೆ.

Tags: First-batch-of-rafaleHilal Ahmad RatheriafIaf-officerindiaRafaleRafale fighter jetsRafale war aircraft
ShareTweetSendShare
Join us on:

Related Posts

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

ನಾನಿನ್ಯಾರಿಗೆ ಸಾಬೀತುಪಡಿಸಬೇಕು? 2027ರ ವಿಶ್ವಕಪ್ ಆಡ್ತಾರಾ ವಿರಾಟ್? ಕೊನೆಗೂ ಮೌನ ಮುರಿದು ಗುಟ್ಟು ಬಿಟ್ಟುಕೊಟ್ಟ ರನ್ ಮಷಿನ್

by Shwetha
May 17, 2026
0

ದಾಖಲೆಗಳ ಸರದಾರ, ಟೀಮ್ ಇಂಡಿಯಾದ ರನ್ ಮಷಿನ್ ಮತ್ತು ಕೋಟ್ಯಂತರ ಅಭಿಮಾನಿಗಳ ನೆಚ್ಚಿನ ಕಿಂಗ್ ವಿರಾಟ್ ಕೊಹ್ಲಿ ಈಗ ಮತ್ತೆ ಸುದ್ದಿಯ ಕೇಂದ್ರಬಿಂದುವಾಗಿದ್ದಾರೆ. ತಮ್ಮ ಕ್ರಿಕೆಟ್ ಭವಿಷ್ಯ...

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್  ವಾಗ್ದಾಳಿ

ಎಸ್‌ಐಆರ್ ಎಂಬ ಗುಪ್ತ ಅಸ್ತ್ರದ ಬಗ್ಗೆ ಎಚ್ಚರ: ಪ್ರಧಾನಿ ಮೋದಿ ವೈಫಲ್ಯಗಳ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ

by Shwetha
May 17, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ರಾಜತಾಂತ್ರಿಕ ವೈಫಲ್ಯಗಳ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ....

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

ನಾನೇ ಖುದ್ದಾಗಿ ಪಕ್ಷದ ಆಫೀಸ್ ಗೆ ಪೇಂಟ್ ಮಾಡ್ತೀನಿ : ಹೋಗುವವರು ಹೋಗಲಿ ಎಂದು ಗುಡುಗಿದ ದೀದಿ

by Shwetha
May 17, 2026
0

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಎಂದೂ ಕಾಣದಂತಹ ಭಾರಿ ಹಿನ್ನಡೆಯನ್ನು ತೃಣಮೂಲ ಕಾಂಗ್ರೆಸ್ ಅನುಭವಿಸಿದೆ. ಬಂಗಾಳದ ಅಧಿಪತಿ ಎಂದೇ ಕರೆಯಲ್ಪಡುತ್ತಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಈಗ...

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

ಮೇ 26ಕ್ಕೆ ಕೇರಳ ಪ್ರವೇಶಿಸಲಿದೆ ಮುಂಗಾರು

by Shwetha
May 17, 2026
0

ದೇಶದ ಕೃಷಿ ಚಟುವಟಿಕೆಗಳಿಗೆ ಜೀವನಾಡಿಯಾಗಿರುವ ನೈಋತ್ಯ ಮುಂಗಾರು ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ...

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ  86%

SIR ಪ್ರಕ್ರಿಯೆ: ರಾಜ್ಯದಲ್ಲಿ 86% ಮ್ಯಾಪಿಂಗ್ ಕೆಲಸ ಪೂರ್ಣ 86%

by Shwetha
May 17, 2026
0

ಅನೂಪ್ ಕುಮಾರ್ ಅವರು ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಈಗಾಗಲೇ ಶೇ.86 ರಷ್ಟು ಮ್ಯಾಪಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram