ಕೊರೊನಾ ಆತಂಕದ ನಡುವೆಯೇ ಇಡೀ ದೇಶಾದ್ಯಂತ ಅತ್ಯಂತ ಶ್ರದ್ಧೆ ಭಕ್ತಿಂದ ಹಿಂದೂಗಳು ವರಮಹಾಲಕ್ಷ್ಮಿ ಹಬ್ಬ ಆಚರಣೆ ಮಾಡಿದ್ರೆ. ಮತ್ತೊಂದೆಡೆ ಮುಸ್ಲಿಂ ಬಾಂಧವರು ಮಸೀದಿಗೆ ತೆರಳಿ ಸುರಕಕ್ಷತಾ ಕ್ರಮಗಳನ್ನು ಪಾಲಿಸುವ ಮೂಲಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಮುಂಜಾನೆ 6 ಗಂಟೆಯಿಂದಲೇ ಎಲ್ಲಾ ಮಸೀದಿಗಳಲ್ಲೂ ಪ್ರಾರ್ಥನೆಗೆ ಅವಕಾಶ ಮಾಡಿಕೊಡಲಾಗಿತ್ತು. ಅದರಂತೆ ತಂಡಗಳಾಗಿ ತೆರಳಿದ ಜನರು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ನಮಾಜ್ ಮಾಡಿರುವ ದೃಷ್ಯಗಳು ಕಂಡುಬಂದಿವೆ. ಪ್ರತಿ ಬಾರಿ ಬಕ್ರೀದ್ ಹಬ್ಬ ಬಂತೆಂದರೆ ಸಾಕು ಎಲ್ಲೆಡೆ ಹಬ್ಬದ ವಾತಾವರಣ ಕಳೆಗಟ್ಟುತ್ತಿತ್ತು. ಈ ಬಾರಿ ಕೊರೊನಾ ಬಿಕ್ಕಟ್ಟಿನಿಂದಾಗಿ ಮಸೀದಿಗಳಲ್ಲಿ ಅಷ್ಟಾಗಿ ಜನದಟ್ಟಣೆ ಕಂಡುಬಂದಿಲ್ಲ. ಸರಳವಾಗಿ ಬಕ್ರೀದ್ ಹಬ್ಬವನ್ನು ಇಡೀ ದೇಶದ ಜನರು ಆಚರಣೆ ಮಾಡಿದ್ದಾರೆ.
ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ
ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...








