ಅಂಬರೀಷ್ ನಂತರ ಕನ್ನಡ ಚಿತ್ರರಂಗದ ಜವಾಬ್ದಾರಿಯನ್ನು ತನ್ನ ಹೆಗಲಿಗೆ ಹೊತ್ತುಕೊಂಡಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇದೀಗ ಕನ್ನಡ ಚಿತ್ರಂಗಲ್ಲಿ ಕೊರೊನಾ ಬಿಕ್ಕಟ್ಟಿನಿಂದ ಆಗುತ್ತಿರುವ ಸಮಸ್ಯೆಗಳ ಕುರಿತಾಗಿ ಸಿಎಂ ಬಿ.ಎಸ್ ಯಡಿಯೂರಪ್ಪನವರೊಂದಿಗೆ ಚರ್ಚೆ ನಡೆಸಲು ಸಜ್ಜಾಗಿದ್ದಾರೆ. ಹೌದು ನಾಯಕತ್ವ ವಹಿಸಿಕೊಂಡ 2 ನೇ ದಿನಕ್ಕೆ ಈ ಬಗ್ಗೆ ಹಲವು ಸಿನಿ ಗಣ್ಯರು ಹಾಗೂ ಸಚಿವ ಸಿಟಿ ರವಿ ಅವರೊಂದಿಗೆ ಶಿವಣ್ಣ ತಮ್ಮ ಮನೆಯಲ್ಲಿ ಈ ಕುರಿತಾಗಿ ಚರ್ಚೆ ನಡೆಸಿದ್ದರು. ಇದೀಗ ಸ್ವತಃ ಸಿಎಂ ಜೊತೆಗೆ ಪ್ರಸ್ತುತ ಚಿತ್ರರಂಗದ ಸ್ಥಿತಿಗತಿ, ಚಿತ್ರೋದ್ಯಮಕ್ಕೆ ಸರ್ಕಾರದಿಂದ ಸಹಾಯ ಸೇರಿದಂತೆ ಕೆಲ ಮಹತ್ವದ ವಿಚಾರಗಳ ಬಗ್ಗೆ ಮಾತುಕತೆ ನಡೆಸಲು ಶಿವಣ್ಣ ಮುಂದಾಗಿದ್ದಾರೆ. ಇದೇ ಮಂಗಳವಾರ ಅಂದ್ರೆ ಆಗಸ್ಟ್ 4 ರಂದು ಶಿವಣ್ಣ ಬಿಎಸ್ ವೈ ಅವರ ಅಧಿಕೃತ ಕಚೇರಿಯಲ್ಲಿ ಭೇಟಿ ಮಾಡಲಿದ್ದಾರೆ. ಈ ವೇಳೆ ಶಿವರಾಜ್ ಕುಮಾರ್ ಅವರಿಗೆ ಚಿತ್ರರಂಗದ ಪ್ರಮುಖರು ಸಾಥ್ ನೀಡಲಿದ್ದಾರೆ.
ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...








