ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಯುರೇಟೀವ್ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಎಲ್ಲಾ ನಾಲ್ವರು ಅಪರಾಧಿಗಳ ಕ್ಯುರೇಟಿವ್ ಅರ್ಜಿ ವಜಾಗೊಂಡಿದೆ. ಆದ್ರೆ ಪವನ್ ಗುಪ್ತಾ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಅವಕಾಶವಿದೆ. ಉಳಿದ ಮೂವರು ಅಪರಾಧಿಗಳಾದ ಮುಖೇಶ್ ಕುಮಾರ್ ಸಿಂಗ್, ವಿನಯ್ ಕುಮಾರ್ ಶರ್ಮಾ ಹಾಗೂ ಅಕ್ಷಯ್ ಕುಮಾರ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನ ರಾಷ್ಟ್ರಪತಿಗಳು ಈಗಾಗಲೇ ವಜಾ ಮಾಡಿದ್ದಾರೆ.
ತಮ್ಮ ಕ್ಷಮಾದಾನ ಅರ್ಜಿ ವಜಾ ಆಗಿದ್ದನ್ನು ಪ್ರಶ್ನಿಸಿ ಮುಕೇಶ್ ಕುಮಾರ್ ಸಿಂಗ್ ಹಾಗೂ ವಿನಯ್ ಶರ್ಮಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲೂ ಕೂಡ ಅವರಿಗೆ ಹಿನ್ನಡೆಯಾಗಿದ್ದು ಅರ್ಜಿಯನ್ನ ಸರ್ವೋಚ್ಛ ನ್ಯಾಯಾಲಯ ತಿರಸ್ಕರಿಸಿತ್ತು.
ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!
ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...








