ಮುಂಬೈನಲ್ಲಿ ಒಂದೆಡೆ ಕೊರೊನಾ ಆರ್ಭಟದಿಂದ ಜನರು ತತ್ತರಿಸಿಹೋಗಿದ್ದಾರೆ. ದಿನೇ ದಿನೇ ಮುಂಬೈನಲ್ಲಿ ಕೊರೊನಾ ಸ್ಫೋಟವಾಗ್ತಿದ್ದು, ದೇಶದಲ್ಲಿ ಹೆಚ್ಚು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿದೆ. ಇದರ ಬೆನ್ನಲ್ಲೇ ಮುಂಬೈನಲ್ಲಿ ವರುಣ ಆರ್ಭಟಿಸುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಕಳೆದ ಕೆಲ ದಿನಗಳಿಂದ ಮುಂಬೈನಲ್ಲಿ ವರುಣಾರ್ಭಟ ಜೋರಾಗಿಯೇ ಇದೆ.
ಇದೀಗ ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಆಗಸ್ಟ್ 3 ರಿಂದ ಆಗಸ್ಟ್ 5 ರವರೆಗೂ ಮಾಯಾನಗರಿ ಮುಂಬೈನ ಹಲವೆಡೆ ಧಾರಾಕಾರ ಮಳೆಯಾಗಲಿದೆ. ಮೊದಲೇ ಕೊರೊನಾ ಮಾಹಾಮಾರಿಯ ಭೀಕರತೆಯಿಂದ ತತ್ತರಿಸಿಹೋಗಿರುವ ಜನರಿಗೆ ಇನ್ನಷ್ಟು ಆತಂಕ ಶುರುವಾಗಿದೆ. ಇನ್ನೂ ಭಾರೀ ಮಳೆ ಬಂದರೆ ಸೋಂಕು ಮತ್ತಷ್ಟು ತೀವ್ರವಾಗಿ ಹರಡುವ ಸಾಧ್ಯತೆಯೂ ಹೆಚ್ಚಾಗಿದೆ.
ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್
ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...








