ಬೆಂಗಳೂರು : ಭಾನುವಾರ ರಾತ್ರಿ ಮತ್ತು ಸೋಮವಾರ ನಸುಕಿನಲ್ಲಿ ರಾಜ್ಯದ ಹಲವೆಡೆ ಮಳೆಯಾಗಿದೆ. ಮಂಗಳೂರು, ಉಡುಪಿ ಜಿಲ್ಲೆಯಾದ್ಯಂತ ಸೋಮವಾರ ಬೆಳಗಿನ ಜಾವ ಬಿರುಸಾಗಿ ಮಳೆ ಸುರಿದಿದೆ. ಹೆಬ್ರಿ, ಪಡುಬಿದ್ರಿ, ಹಿರಿಯಡ್ಕ, ಬ್ರಹ್ಮಾವರದಲ್ಲಿ ಸುರಿದ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ. ಪಡುಬಿದ್ರಿಯ ಕಲ್ಸಂಕ ಸೇತುವೆ ಕಾಮಗಾರಿ ಪ್ರದೇಶದಲ್ಲಿ ಮಳೆ ನೀರು ಜಮಾವಣೆಗೊಂಡು ಕೃತಕ ನೆರೆ ಸೃಷ್ಟಿ ಯಾಗಿದೆ. ಇತ್ತ ಕೊಡಗು ಜಿಲ್ಲೆಯ ಹಲವೆಡೆ ಇಂದು ಬೆಳಿಗ್ಗೆ ಮಳೆಯಾಗಿದೆ. ಭಾಗಮಂಡಲ, ನಾಪೋಕ್ಲು, ತಲಕಾವೇರಿ, ಅಪ್ಪಂಗಳ ಸುತ್ತಮುತ್ತ ಮಳೆಯಾಗುತ್ತಿದೆ. ಜಿಲ್ಲೆಯ ಉಳಿದೆಡೆ ದಟ್ಟವಾದ ಮೋಡ ಕವಿದ ವಾತಾವರಣ ಇದೆ.
ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ ‘ಸ್ಲಮ್ ಡಾಗ್’ ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್;
ವಿಜಯ್ ಸೇತುಪತಿ ಮತ್ತು ಪೂರಿ ಜಗನ್ನಾಥ್ ಅವರ ಬಹುನಿರೀಕ್ಷಿತ ಆಕ್ಷನ್-ಡ್ರಾಮಾ 'ಸ್ಲಮ್ ಡಾಗ್' ಚಿತ್ರದ ಹೊಸ ಗ್ಲಿಂಪ್ಸ್ ರಿಲೀಸ್; ಪವರ್ಫುಲ್ ಅಧಿಕಾರಿ 'ಗೌರಿ ಹೆಗ್ಡೆ' ಪಾತ್ರದಲ್ಲಿ ಟಬು!...








