ಬೆಂಗಳೂರು : ಭಾನುವಾರ ರಾತ್ರಿ ಮತ್ತು ಸೋಮವಾರ ನಸುಕಿನಲ್ಲಿ ರಾಜ್ಯದ ಹಲವೆಡೆ ಮಳೆಯಾಗಿದೆ. ಮಂಗಳೂರು, ಉಡುಪಿ ಜಿಲ್ಲೆಯಾದ್ಯಂತ ಸೋಮವಾರ ಬೆಳಗಿನ ಜಾವ ಬಿರುಸಾಗಿ ಮಳೆ ಸುರಿದಿದೆ. ಹೆಬ್ರಿ, ಪಡುಬಿದ್ರಿ, ಹಿರಿಯಡ್ಕ, ಬ್ರಹ್ಮಾವರದಲ್ಲಿ ಸುರಿದ ಮಳೆಗೆ ರಸ್ತೆಗಳು ಜಲಾವೃತಗೊಂಡಿವೆ. ಪಡುಬಿದ್ರಿಯ ಕಲ್ಸಂಕ ಸೇತುವೆ ಕಾಮಗಾರಿ ಪ್ರದೇಶದಲ್ಲಿ ಮಳೆ ನೀರು ಜಮಾವಣೆಗೊಂಡು ಕೃತಕ ನೆರೆ ಸೃಷ್ಟಿ ಯಾಗಿದೆ. ಇತ್ತ ಕೊಡಗು ಜಿಲ್ಲೆಯ ಹಲವೆಡೆ ಇಂದು ಬೆಳಿಗ್ಗೆ ಮಳೆಯಾಗಿದೆ. ಭಾಗಮಂಡಲ, ನಾಪೋಕ್ಲು, ತಲಕಾವೇರಿ, ಅಪ್ಪಂಗಳ ಸುತ್ತಮುತ್ತ ಮಳೆಯಾಗುತ್ತಿದೆ. ಜಿಲ್ಲೆಯ ಉಳಿದೆಡೆ ದಟ್ಟವಾದ ಮೋಡ ಕವಿದ ವಾತಾವರಣ ಇದೆ.
fifawordcup-2026: ಈತ ಬರೀ ಫುಟ್ಬಾಲ್ ಆಟಗಾರನಲ್ಲ.. ಸಾವಿರಾರು ಬಡ ಪ್ರತಿಭೆಗಳಿಗೆ ಬೆಳಕು ನೀಡೋ ನಂದಾದೀಪ..!
ಬಡತನ ಅವನ ಕಾಲಿಗೆ ಬೂಟ್ಗಳನ್ನು ಕೊಡಲಿಲ್ಲ. ಆದ್ರೆ ಹೃದಯಕ್ಕೆ ಧೈರ್ಯ ಕೊಟ್ಟಿತ್ತು. ಹಸಿವು ಆತನ ಹೊಟ್ಟೆಯನ್ನು ಸುಡುವಂತೆ ಮಾಡಿತ್ತು. ಆದ್ರೆ ಕಂಡ ಕನಸುಗಳನ್ನು ಸುಡಲಿಲ್ಲ. ಹೊಟ್ಟೆ ತುಂಬಾ...








