ಕುಂದಾಪುರ: ಕರ್ನಾಟಕದಲ್ಲಿ ಪಾಕ್ ಕ್ರಿಮಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕುಂದಾಪುರದಲ್ಲಿ ವ್ಯಕ್ತಿಯೋರ್ವ ಪಾಕಿಸ್ತಾನ್ ಜಿಂದಾಬಾದ್ ಎಂದಿದ್ದಾನೆ. ಪಾಕ್ ಪರ ಘೋಷಣೆ ಕೂಗಿದವನನ್ನು ಕೋಡಿ ನಿವಾಸಿ ರಾಘವೇಂದ್ರ ಗಾಣಿಗ ಎಂದು ಗುರುತಿಸಲಾಗಿದೆ. ಈತ ಕುಂದಾಪುರ ಮಿನಿ ವಿಧಾನಸೌಧದ ಎದುರು ನಿರಂತರವಾಗಿ ‘ಪಾಕಿಸ್ತಾನ ಝಿಂದಾಬಾದ್’ ಕೂಗುತ್ತಿರುವ ವೀಡಿಯೋ ವೈರಲ್ ಆಗಿದೆ. ಈ ಬಗ್ಗೆ ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ಕುಂದಾಪುರ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ರಾಘವೇಂದ್ರ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ವಿದೇಶಾಂಗ ನೀತಿ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದೇಶಾಂಗ ನೀತಿ ಎಂಬುದು ಒಬ್ಬ ವ್ಯಕ್ತಿಯ ನಿರ್ಧಾರದಿಂದ...








