ಆಗಸ್ಟ್ 5ರಂದು ಹಿಂದೂಗಳ ಕನಸಾದ ರಾಮಮಂದಿರ ನಿಮಾರ್ಣದ ಶಿಲಾನ್ಯಾಸ ಸಮಾರಂಭ ನಡೆಯಲಿದೆ. ಪ್ರಧಾನ ಮಂತ್ರಿ ಮೋದಿ ಅವರು ಶಿಲಾನ್ಯಾಸ ನೆರವೇರಿಸಲಿದ್ದು, ವಿವಿಧ ಧಾರ್ಮಿಕ ಮುಖಂಡರು ಹಾಗೂ ಗಣ್ಯರನ್ನು ಈ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಈಗಾಗಲೇ ಶಿಲಾನ್ಯಾಸ ಸಮಾರಂಭಕ್ಕೆ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಈ ನಡುವೆ ಈ ವಿಚಾರವಾಗಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಪ್ರತಿಕ್ರಿಯೆ ನೀಡಿದ್ದು, ಇದೇ ತಿಂಗಳ 5ನೇ ತಾರೀಕಿನಂದು ಐತಿಹಾಸಿಕ ಭೂಮಿಪೂಜೆ ನಡೆಯಲಿದೆ. ಅಂದು ಕೋಟ್ಯಂತರ ಆಸ್ತಿಕರ ಬಹುಕಾಲದ ಕನಸು ನನಸಾಗಲಿದೆ ಎಂದು ತಿಳಿಸಿದ್ದಾರೆ. ರಾಮಜನ್ಮ ಭೂಮಿ ಟ್ರಸ್ಟ್ ನ ಟ್ರಸ್ಟಿಯಾಗಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಕೊರೊನಾದಿಂದಾಗಿ ನಮಗೆಲ್ಲ ದೈಹಿಕವಾಗಿ ಭಾಗವಹಿಸಲು ಸಾಧ್ಯ ಆಗದು. ಆದರೆ, ಈ ಕಾರ್ಯಕ್ರಮದ ನೇರಪ್ರಸಾರವನ್ನು ನಾವು ಇದ್ದ ಸ್ಥಳದಿಂದಲೇ ವಿಕ್ಷಣೆ ಮಾಡಿ ಭಾಗವಹಿಸೋಣ ಎಂದರು. ಇದೇ ವೇಳೆ ಕೊರೊನಾದಿಂದಾಗಿ ನಮಗೆಲ್ಲ ದೈಹಿಕವಾಗಿ ಭಾಗವಹಿಸಲು ಸಾಧ್ಯ ಆಗದು. ಆದರೆ, ಈ ಕಾರ್ಯಕ್ರಮದ ನೇರಪ್ರಸಾರವನ್ನು ನಾವು ಇದ್ದ ಸ್ಥಳದಿಂದಲೇ ವಿಕ್ಷಣೆ ಮಾಡಿ ಭಾಗವಹಿಸೋಣ ಎಂದಿರುವ ಶ್ರೀಗಳು ಶಿಲಾನ್ಯಾಸ ಸಮಾರಂಭದ ದಿನ ಮನೆಯ ಮೇಲೆ ಭಗವಾಧ್ವಜವನ್ನು ಹಾರಿಸುವ ಮೂಲಕ ಈ ಕಾರ್ಯಕ್ರಮದಲ್ಲಿ ಭಾಗವಹಿಸೋಣ ಎಂದು ಕರೆ ನೀಡಿದರು.
ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು
ಕರ್ನಾಟಕ ರಾಜ್ಯದ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರವು ಚೇತರಿಸಿಕೊಳ್ಳಲಾಗದಂತಹ ಕಹಿ ಸುದ್ದಿ ನೀಡಿದೆ. ಮುಂಬರುವ ಮೇ 1 ರಿಂದ ರಾಜ್ಯಾದ್ಯಂತ ಹೊಸ ಅಬಕಾರಿ ನೀತಿಯು ಜಾರಿಗೆ ಬರಲಿದ್ದು ಇದರ...








