ಸುಶಾಂತ್ ಸಾವಿನ ಬಳಿಕ ಹಲವರ ವಿರುದ್ಧ ಗಂಭೀರವಾಗಿ ಆರೋಪ ಮಾಡುತ್ತಲೇ ಸುದ್ದಿಯಲ್ಲಿರುವ ಕಂಗನಾ ರಣಾವತ್ ನಿವಾಸದ ಬಳಿ ಗುಂಡಿನ ಸದ್ದು ಕೇಳಿಬಂದಿದೆ. ಮನಾಲಿಯ ನಿವಾಸದ ಬಳಿ ಗುಂಡಿನ ಸದ್ದು ಕೇಳಿಬಂದಿದ್ದು ಈ ಬಗ್ಗೆ ಕಂಗನಾ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಅಲ್ದೇ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನಿಡಿರುವ ಕಂಗನಾ ಶುಕ್ರವಾರ ತಡರಾತ್ರಿ 11.30ರ ಸಮಯಕ್ಕೆ ಮನಯ ಆವರಣದಲ್ಲಿ ಗುಂಡಿನ ಸದ್ದು ಕೇಳಿಬಂದಿರುವುದಾಗಿ ತಿಳಿಸಿದ್ದಾರೆ. ಅಲ್ದೇ ಇತ್ತೀಚೆಗೆ ನಾನು ರಾಜಕೀಯವಾಗಿ ಹಾಗೂ ದೊಡ್ಡ ದೊಡ್ಡ ಕುಳಗಳ ವಿರುದ್ಧವೂ ಹೇಳಿಕೆಗಳನ್ನು ನೀಡ್ತಿದ್ದು, ಯಾರೋ ನನಗೆ ವಾರ್ನಿಂಗ್ ಕೊಡಲೆಂದೇ ಈ ರೀತಿ ಮಾಡಿದ್ದಾರೆ. ಆದ್ರೆ ನಾನು ಇದಕ್ಕೆಲ್ಲ ತಲೆ ಕೆಡಿಸಿಕೊಮಡು ಸುಮ್ಮನೆ ಕೂರುವುದಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲ ಕಂಗನಾ ಟೀಂ ಬೇರೆಯದ್ದೇ ರೀತಿಯಾದ ಚರ್ಚೆಗಳಲ್ಲಿ ತೊಡಗಿದೆ. ಇತ್ತೀಚೆಗೆ ಆದಿತ್ಯ ಠಾಕ್ರೆ ಅವರ ಬಗ್ಗೆಯೂ ಕಂಗನಾ ಮಾತನಾಡಿದ್ದು, ಆ ಕಾರಣದಿಂದಲೇ ದಾಳಿ ಯತ್ನ ನಡೆದಿದೆ ಎಂದು ಆರೋಪಗಳನ್ನು ಮಾಡುತ್ತಿದ್ದಾರೆ.
FIFAWORLDCUP2026- ರಾಜನ ದೂರದೃಷ್ಟಿಯ ಯುಕ್ತಿ…! ಬಿಳಿ ಚಿನ್ನದ ಶಕ್ತಿ..! ಭಾರತಕ್ಕೆ ಪಾಠವಾಗಲಿದೆ ಮೊರಾಕ್ಕೋ ಫುಟ್ಬಾಲ್ ಕ್ರಾಂತಿ..!
ಹಾಗಂತ... ಇದು ಖಂಡಿತವಾಗಿಯೂ ಫುಟ್ಬಾಲ್ ಜಗತ್ತಿನ ಕಾಲ್ಪನಿಕ ಕಥೆಯಂತೂ ಅಲ್ಲವೇ ಅಲ್ಲ. ಬದಲಾಗಿ ಮತ್ತೊಂದು ಸಣ್ಣ ದೇಶದ ಫುಟ್ಬಾಲ್ ಆಟದ ಮಹೋನ್ನತ ಪರ್ವದ ನೈಜ ಚಿತ್ರಣ. ಒಬ್ಬ...








