ಬೆಂಗಳೂರು : ದೊರೆಸ್ವಾಮಿ ಬಗ್ಗೆ ನೀಡಿರುವ ಯಾವುದೇ ಹೇಳಿಕೆಯನ್ನು ಹಿಂಪಡೆಯಲ್ಲ. ಅವರಲ್ಲಿ ಕ್ಷಮೆ ಕೇಳುವ ಪ್ರಶ್ನೇ ಇಲ್ಲ. ನಾನು ಸ್ವಾತಂತ್ರö್ಯ ಹೋರಾಟಗಾರರಿಗೆ ಗೌರವ ಕೊಡುತ್ತೇನೆಯೇ ಹೊರತು ನಕಲಿ ಹೋರಾಟಗಾರರಿಗೆ ಅಲ್ಲ ಎಂದು ಮತ್ತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದೊರೆಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊರೆಸ್ವಾಮಿ ಹೋರಾಟದ ಬಗ್ಗೆ ತನಿಖೆಯಾಗಲಿ. ಅವರು ಬ್ರಿಟಿಷ್ ಲಾಠಿಯ ಬೂಟಿನ ಏಟು ತಿಂದಿದ್ದಾರೆಯೇ? ಕಾಲಾಪಾನಿ ಶಿಕ್ಷೆ ಎಷ್ಟು ಬಾರಿ ಅನುಭವಿಸಿದ್ದಾರೆ ? ಎಷ್ಟು ಸಲ ದೊರೆಸ್ವಾಮಿ ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಪ್ರಶ್ನಿಸಿದರು.
ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...








