ಬೆಂಗಳೂರು: ನಾಳೆ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಲಿದೆ.
ನಾಳೆ ಮಧ್ಯಾಹ್ನ 12.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ಮಾಡುತ್ತಿದ್ದಾರೆ. ಶಿಲಾನ್ಯಾಸ ಮಾಡುವ ವೇಳೆ ರಾಜ್ಯದಲ್ಲಿರುವ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ನಡೆಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ.
ಕೊರೊನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಎಸ್ವೈ, ನಾಳೆ ಪೂಜೆ ಸಲ್ಲಿಸಲು ಆದೇಶ ಹೊರಡಿಸುವಂತೆ ಸಚಿವರು ಹಾಗೂ ಅಧಿಕಾರಿಗಳಿಗೆ ದೂರವಾಣಿ ಮೂಲಕ ನಿರ್ದೇಶನ ನೀಡಿದ್ದಾರೆ.
ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆ, ಎಲ್ಲಾ ಮುಜರಾಯಿ ದೇವಸ್ಥಾನಗಳಿಗೆ ಸುತ್ತೋಲೆ ರವಾನಿಸಿದೆ.
ನಾಳೆ ಮುಜರಾಯಿ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲೂ ರಾಮಮಂದಿರಕ್ಕೆ ಶಂಕು ಸ್ಥಾಪನೆಗೆ ಶುಭವಾಗಲೆಂದು ಹಾರೈಸಿ ಪೂಜೆ ಸಲ್ಲಿಸುವಂತೆ ಸೂಚನೆ ನೀಡಿದೆ.
ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!
ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...








