ಜಗತ್ತಿನಾದ್ಯಂತ ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ.
ಶಾಲೆಗಳಲ್ಲಿ ಶಾಲಾ ಶಿಕ್ಷಕರು, ಸಿಬ್ಬಂದಿಗಳು ಅಥವಾ ವಿದ್ಯಾರ್ಥಿಗಳು ಶೀತ, ಜ್ವರ ಅಥವಾ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರೆ, ಅವರಿಗೆ ಕಡ್ಡಾಯವಾಗಿ ರಜೆ ನೀಡುವಂತೆ ಶಾಲಾ ಆಡಳಿತ ಮಂಡಳಿಗೆ ಆದೇಶಿಸಿದೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ವೈದ್ಯರಿಂದ ಕಾಯಿಲೆ ಗುಣಮುಖವಾಗಿರುವುದನ್ನು ಖಚಿತ ಪಡಿಸಿಕೊಂಡ ನಂತರವಷ್ಟೇ ಶಾಲೆಗೆ ಬರಲು ತಿಳಿಸಿದೆ. ವಿದ್ಯಾರ್ಥಿಗಳಿಗೆ ರೋಗ ಲಕ್ಷಣ ಕಾಣಿಸಿಕೊಂಡ ತಕ್ಷಣವೇ ಮನೆಗೆ ಕಳುಹಿಸಲು ಇಲಾಖೆ ನಿರ್ದೇಶಿಸಿದೆ. ವಿದ್ಯಾರ್ಥಿ ನಿಲಯದಲ್ಲಿ ರೋಗ ಲಕ್ಷಣಗಳು ಕಾಣಿಸಿದಲ್ಲಿ, ಆ ವಿದ್ಯಾರ್ಥಿಯನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡುವಂತೆಯೂ, ಚೀನಾದಿಂದ ಬಂದವರಿದ್ದರೆ ಅವರ ಮೇಲೆ ನಿಗಾ ಇಡುವಂತೆಯೂ ಸೂಚಿಸಿದೆ.
ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್ಶಿಪ್ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...








