ಇಂದು ದೇಶಾದ್ಯಂತ ಸಂಭ್ರಾಚರಣೆ ಮನೆ ಮಾಡಿದೆ. ಯಾಕೆಂದರೆ ಇಂದು ಶತಕಗಳ ಹಿಂದೂಗಳ ಕನಸು ನನಸಾದ ಐತಿಹಾಸಿಕ ದಿನ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದ್ದು, ದೇಶದಲ್ಲಿ ಸಂತಸ ಮನೆ ಮಾಡಿದೆ. ಈ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮಾಡುವ ಮೂಲಕ ದೇಶದ ಜನತೆಗೆ ಶುಭಕೋರಿದ್ದಾರೆ.
“ದೇಶದ ಎಲ್ಲಾ ಪ್ರಜೆಗಳಿಗೂ ಅಭಿನಂದನೆಗಳು. ಶ್ರೀರಾಮನ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ. ಆ ದೇವರ ಕೃಪೆಯಿಂದ ದೇಶದಲ್ಲಿನ ಬಡತನ ಹಾಗೂ ಹಸಿವು ದೂರವಾಗಲಿ. ಭಾರತವು ವಿಶ್ವದ ಅತ್ಯಂತ ಶಕ್ತಿಶಾಲಿ ರಾಷ್ಟ್ರವಾಗಿ ರೂಪುಗೊಳ್ಳಲಿ. ಭವಿಷ್ಯದಲ್ಲಿ ಭಾರತವು ಇಡೀ ಜಗತ್ತಿಗೆ ದಾರಿ ದೀಪವಾಗಲಿ. ಜೈ ಶ್ರೀರಾಮ್, ಜೈ ಬಜರಂಗ ಬಲಿ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ
ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...







