ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಘವೇಂದ್ರ ಬ್ಯಾಂಕ್ ಹಗರಣ ತನಿಖೆಗೆ ಕಾಣದ ಕೈಗಳ ಅಡ್ಡಿ?

admin by admin
August 5, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

Related posts

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

May 20, 2026
ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

May 20, 2026

ರಾಘವೇಂದ್ರ ಬ್ಯಾಂಕ್ ಹಗರಣ ತನಿಖೆಗೆ ಕಾಣದ ಕೈಗಳ ಅಡ್ಡಿ?
ಶ್ರೀ ಗುರು ರಾಘವೇಂದ್ರ ಕೋಆಪರೇಟಿವ್ ಬ್ಯಾಂಕ್ ನ ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆ ಕುರಿತು ಹಲವಾರು ಅನುಮಾನಗಳು ಮೂಡತೊಡಗಿವೆ.
ಮಾಜಿ ಸಿಇಒ ವಾಸುದೇವ ಮಯ್ಯ ತಮ್ಮ ಡೆತ್ ನೋಟ್ ನಲ್ಲಿ ಹಾಲಿ ಸಿಇಒ ಸಂತೋಷ್ ಸೇರಿದಂತೆ 11 ನಿರ್ದೇಶಕರು ಮತ್ತು ಅಧಿಕಾರಿಗಳ ಹೆಸರನ್ನು ಉಲ್ಲೇಖ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇದರ ಆಧಾರದಲ್ಲಿ ಮಯ್ಯ ಅವರ ಪುತ್ರಿ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ರಾಜ್ಯ ಹೈಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ದೂರನ್ನು ದಾಖಲು ಮಾಡಿಕೊಂಡಿರುವ ಸಿಐಡಿ ಪೊಲೀಸರು ಹಲವಾರು ವಾಣಿಜ್ಯೋದ್ಯಮಿಗಳ ಮನೆ ಮತ್ತು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ವಾಣಿಜ್ಯೋದ್ಯಮಿಗಳು ಶ್ರೀ ಗುರು ರಾಘವೇಂದ್ರ ಬ್ಯಾಂಕಿಗೆ ನಕಲಿ ದಾಖಲೆಗಳನ್ನು ನೀಡಿ ಸಾಲ ಪಡೆದಿದ್ದ ಆರೋಪಗಳು ಕೇಳಿ ಬಂದಿದ್ದವು.
ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಕೇವಲ ವಾಣಿಜ್ಯೋದ್ಯಮಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆಯೇ ಹೊರತು ಮಯ್ಯ ಅವರು ಉಲ್ಲೇಖ ಮಾಡಿರುವ ವ್ಯಕ್ತಿಗಳ ವಿಚಾರಣೆ ಮಾಡುತ್ತಿಲ್ಲ ಅಥವಾ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಏಕೆ ಎಂಬ ಪ್ರಶ್ನೆಗಳು ಎದುರಾಗುತ್ತಿವೆ.
ಮಯ್ಯ ತಮ್ಮ ಡೆತ್ ನೋಟ್ ನಲ್ಲಿ ಹೆಸರಿಸಲಾಗಿರುವ ಹಾಲಿ ಸಿಇಒ ಮತ್ತು ಬ್ಯಾಂಕಿನ ಇತರೆ ಸಿಬ್ಬಂದಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದರೂ ಅವರನ್ನು ಬಂಧಿಸುವ ಗೋಜಿಗೆ ಹೋಗಿಲ್ಲದಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ.
ಇದಲ್ಲದೇ, ಮಾಜಿ ಸಿಇಒ ಮಯ್ಯ ಅವರು ಬರೆದಿಟ್ಟಿದ್ದ ಡೆತ್ ನೋಟ್ ಅನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿಲ್ಲ.
ಅಂದರೆ, ಈ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಪಾರು ಮಾಡಲು ರಾಜಕೀಯ ಮತ್ತು ಅಧಿಕಾರಸ್ಥರ ಪ್ರಭಾವ ಹಸ್ತಕ್ಷೇಪ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಅದೇ ರೀತಿ ಕೆಲವು ರಾಜಕಾರಣಿಗಳು ಅಧಿಕಾರಿಗಳು ಬ್ಯಾಂಕಿನ ದೈನಂದಿನ ವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಲಿ ಸಿಇಒ ಸಂತೋಷ್ ಅವರಿಗೆ ನೊಟೀಸ್ ಅನ್ನು ಜಾರಿ ಮಾಡಿದೆ. ಆದರೆ, ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಪ್ರಗತಿಯನ್ನು ಸಾಧಿಸಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.
ಅಂದರೆ, ಜಾರಿ ನಿರ್ದೇಶನಾಲಯದ ತನಿಖೆಯಲ್ಲಿಯೂ ಕಾಣದ ಕೈಗಳು ಹಸ್ತಕ್ಷೇಪ ಮಾಡುತ್ತಿವೆಯೇ? ಎಂಬ ಅನುಮಾನಗಳು ಮೂಡತೊಡಗಿವೆ.
ಒಂದು ವೇಳೆ, ಇಂತಹ ಯಾವುದೇ ಹಸ್ತಕ್ಷೇಪಗಳು ಇಲ್ಲದಿದ್ದರೆ ಜಾರಿ ನಿರ್ದೇಶನಾಲಯ ತನಿಖೆಯನ್ನು ಚುರುಕುಗೊಳಿಸಿ ಹಾಲಿ ಸಿಇಒ ಮತ್ತು ಅಧ್ಯಕ್ಷ ರಾಮಕೃಷ್ಣ ಸೇರಿ ಬ್ಯಾಂಕಿನ ಇತರೆ ನಿರ್ದೇಶಕರನ್ನು ಏಕೆ ವಿಚಾರಣೆಗೆ ಒಳಪಡಿಸಿಲ್ಲ ಎಂಬ ಪ್ರಶ್ನೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಉತ್ತರ ನೀಡಬೇಕಾಗಿದೆ.

Tags: basavagudibengalurukarnatakaReserve Bank of IndiaSri Guru Raghavendra Cooperative BankVasudeva MaiyaVasudeva Maiya suicide
ShareTweetSendShare
Join us on:

Related Posts

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

by Shwetha
May 20, 2026
0

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಗುಹಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ವಿಖ್ಯಾತ ಬಾದಾಮಿ ಗುಹೆಗಳಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ...

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್: ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ಜನರ ಹಣದಲ್ಲಿ ಕಾಂಗ್ರೆಸ್ ಮೋಜು-ಮಸ್ತಿ: ನಿಖಿಲ್ ಕುಮಾರಸ್ವಾಮಿ ಟೀಕೆ

by Shwetha
May 20, 2026
0

ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಾಧನಾ ಸಮಾವೇಶ ಕುರಿತು ಮಾತನಾಡಿದ ಅವರು, ಯಾವ ಪುರುಷಾರ್ಥಕ್ಕೆ ಈ ಸಮಾವೇಶ...

ಬಿಜೆಪಿ ಬೆಂಕಿ ಹಚ್ಚುವ ರಾಜಕೀಯ ಮಾಡುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

ಬಿಜೆಪಿ ಬೆಂಕಿ ಹಚ್ಚುವ ರಾಜಕೀಯ ಮಾಡುತ್ತದೆ: ಸಿದ್ದರಾಮಯ್ಯ ವಾಗ್ದಾಳಿ

by Shwetha
May 20, 2026
0

ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಸರ್ಕಾರ ಎಲ್ಲ ವರ್ಗಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ...

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

ರಸ್ತೆಯಲ್ಲಿ ನಮಾಜ್ ಮಾಡುವಂತಿಲ್ಲ, ಜಾಗವಿಲ್ಲದಿದ್ದರೆ ಜನಸಂಖ್ಯೆ ನಿಯಂತ್ರಿಸಿ: ಬಕ್ರೀದ್ ಹಿನ್ನೆಲೆ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ

by Shwetha
May 20, 2026
0

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಬ್ಬದ ಮುನ್ನವೇ ರಾಜ್ಯದ ಜನತೆಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ಯಾವುದೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram