ADVERTISEMENT
Thursday, July 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಕೇಶಿಯ ನೆಡುತೋಪು ಮಲೆನಾಡಿಗೆ ಬೇಡ ಹೋರಾಟ ಸಮಿತಿಯಿಂದ ಸರ್ಕಾರಕ್ಕೆ ಎಚ್ಚರಿಕೆ:

admin by admin
August 6, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಅಕೇಶಿಯ ನೆಡುತೋಪು ಮಲೆನಾಡಿಗೆ ಬೇಡ ಹೋರಾಟ ಸಮಿತಿಯಿಂದ ಸರ್ಕಾರಕ್ಕೆ ಎಚ್ಚರಿಕೆ:

ಶಿವಮೊಗ್ಗ: ಭದ್ರಾವತಿಯ ಕಾಗದ ಕಾರ್ಖಾನೆ ಎಂಪಿಎಂ ಗೆ ಸೇರಿದ್ದ ಸುಮಾರು 82 ಸಾವಿರ ಎಕರೆ ಅರಣ್ಯ ಭೂಮಿಯ ಗುತ್ತಿಗೆ ಅವಧಿ ಮುಗಿದಿದ್ದು, ಸರ್ಕಾರ ತಕ್ಷಣವೇ ಅದನ್ನು ವಾಪಾಸ್ ಪಡೆದು ಸಹಜ ಅರಣ್ಯ ಬೆಳೆಸಬೇಕು ಎಂದು ‘ನಮ್ಮೂರಿಗೆ ಅಕೇಶಿಯಾ ಮರ ಬೇಡ ಹೋರಾಟ ಒಕ್ಕೂಟ’ ಆಗ್ರಹಿಸಿದೆ. ಇಂದು ಶಿವಮೊಗ್ಗ ಪ್ರೆಸ್‍ಟ್ರಸ್ಟ್ ಸಭಾಂಗಣದಲ್ಲಿ ನಡೆದ ಒಕ್ಕೂಟದ ಪೂರ್ವಭಾವಿ ಸಭೆಯಲ್ಲಿ ಈ ಒಕ್ಕೊರಲ ಅಭಿಪ್ರಾಯ ವ್ಯಕ್ತವಾಯಿತು.

Related posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

July 2, 2026
ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

July 2, 2026

ಮುಖ್ಯವಾಗಿ ಮಲೆನಾಡಿನ ಕಾಡು, ನೆಲ, ಜಲದ ಮೇಲೆ ಹಕ್ಕು ಮಲೆನಾಡಿಗರಿಗೆ ಸೇರಿದ್ದು. ಅಲ್ಲಿ ನೈಸರ್ಗಿಕ ಅರಣ್ಯ ಬೆಳೆಯಬೇಕೇ ವಿನಃ ಅರಣ್ಯ ಇಲಾಖೆಗೆ, ಸರ್ಕಾರಕ್ಕೆ ಲಾಭಕೋರ ದಂಧೆ ಮಾಡುವ ಉದ್ಯಮವಾಗಬೇಕಿಲ್ಲ. ಹಸಿರು ಬೆಳೆಯಬೇಕಾದ ಜಾಗದಲ್ಲಿ ಕೆಲವರ ಹಿತಾಸಕ್ತಿಗಾಗಿ ಹಣ ಬೆಳೆಯಬೇಕಾಗಿಲ್ಲ. ವಿವಿಧ ಕಾರಣದಿಂದಾಗಿ ತೀವ್ರ ಒತ್ತಡಕ್ಕೆ ಸಿಲುಕಿರುವ ಮಲೆನಾಡಿನಲ್ಲಿ ಕಾಡು ಮರೆಯಾಗುತ್ತಿರುವಾಗ ಬರೋಬ್ಬರಿ 80 ಸಾವಿರ ಎಕರೆ ಕಾಡು ಬೆಳೆಸುವ ಅವಕಾಶವನ್ನು ಮಲೆನಾಡಿಗರು ಕಳೆದುಕೊಳ್ಳಲು ಸಿದ್ಧರಿಲ್ಲ. ಹಾಗಾಗಿ ಸರ್ಕಾರ, ಎಂಪಿಎಂ ಲೀಜ್ ಅವಧಿ ಮುಗಿಯುತ್ತಿದ್ದಂತೆ ಆ ಜಾಗವನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಬೇಕು ಮತ್ತು ಅಲ್ಲಿ ನೈಸರ್ಗಿಕ ಕಾಡು ಬೆಳೆಯಲು ರಕ್ಷಣೆ ಒದಗಿಸಬೇಕು. ಇಲ್ಲವಾದಲ್ಲಿ ಮಲೆನಾಡಿನಾದ್ಯಂತ ಇದೊಂದು ಭಾವನಾತ್ಮಕ ವಿಷಯವಾಗಿ ಆಂದೋಲನೋಪಾದಿಯಲ್ಲಿ ಹೋರಾಟ ಭುಗಿಲೇಳಲಿದೆ ಎಂದು ವೇದಿಕೆ ಸರ್ಕಾರಕ್ಕೆ ಎಚ್ಚರಿಕೆ ನೀಡಿತು.

ಹೋರಾಟದ ಸ್ವರೂಪದ ಕುರಿತು ಸುದೀರ್ಘ ಚರ್ಚೆ ನಡೆಸಿದ ಒಕ್ಕೂಟ, ಆ ಕುರಿತ ಹಲವು ನಿರ್ಣಯಗಳನ್ನು ಅಂಗೀಕರಿಸಿ, ಸರ್ಕಾರಕ್ಕೆ ಸಲ್ಲಿಸಲು ನಿರ್ಧರಿಸಿತು. ಈ ಇರುವ ಭೂಮಿಯಲ್ಲಿ ನೈಸರ್ಗಿಕ ಅರಣ್ಯ ಬೆಳೆಸಲು ಒತ್ತು ನೀಡುವುದು, ಅರಣ್ಯ ಬೆಳೆಸಲು ಸಾದ್ಯವಿರದ ಕಡೆ ಭೂರಹಿತರಿಗೆ ನೀಡಿ ಅಲ್ಲಿ ಕಾಡುಬೆಳೆ ಬೆಳೆಸಲು ಅನುಮತಿ ನೀಡಬೇಕು, ಮತ್ತು ಅಲ್ಲಿನ ಉತ್ಪನ್ನಗಳ ಲಾಭವನ್ನು ಆ ರೈತರಿಗೆ ನೀಡಬೇಕು. ಜಿಲ್ಲಾಚಾಯತಿ, ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿಗಳಲ್ಲಿ ಗುತ್ತಿಗೆ ವಿಸ್ತರಣೆ ಮತ್ತು ನೆಡುತೋಪು ವಿರುದ್ಧ ನಿರ್ಣಯ ಅಂಗೀಕರಿಸಿ ಸರ್ಕಾರಕ್ಕೆ ಕಳಿಸಬೇಕು. ಅಂತಿಮವಾಗಿ ಜನ ಹೋರಾಟಕ್ಕೆ ಸರ್ಕಾರ ಮಣಿಯದೇ ಹೋದಲ್ಲಿ ನ್ಯಾಯಾಲಯದಲ್ಲಿ ದಾವೆ ಹೂಡಲು ಸಿದ್ದರಾಗಬೇಕು. ಕಾಡು ಮತ್ತು ಜೀವವೈವಿಧ್ಯ ಸೇವೆಗಳಿಗೆ ಬೆಲೆಕಟ್ಟಬೇಕು. ಮಲೆನಾಡಿಗರ ನಮ್ಮಭೂಮಿ ನಮ್ಮ ಹಕ್ಕು ಸ್ಥಾಪಿತವಾಗಬೇಕು. ಭೂಮಿ ಒಂದು ಭಾವನಾತ್ಮಕ ವಿಷಯ. ನಮ್ಮ ಭೂಮಿಯಲ್ಲಿ ಯಾರಿಗೂ ದಂಧೆ ಮಾಡಲು ಅವಕಾಶವಿಲ್ಲ. ಇವು ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳಾಗಿವೆ.

ಎಂಪಿಎಂ ಕಾರ್ಖಾನೆ ನಡೆಯುತ್ತಿರುವಾಗ ಸರ್ಕಾರ ಪಶ್ಚಿಮಘಟ್ಟದ ಹಲವು ಕಡೆ ಸುಮಾರು 82 ಸಾವಿರಕ್ಕೂ ಹೆಚ್ಚು ಎಕರೆ ಭೂಮಿಯನ್ನ 40 ವರ್ಷಗಳ ಅವಧಿಗೆ ಎಂಪಿಎಂ ನೆಡುತೋಪು ನಿರ್ಮಾಣಕ್ಕೆ ನೀಡಿತ್ತು. ಆದರೆ ಈ ಗುತ್ತಿಗೆ ಅವಧಿ ಇದೇ ಆಗಸ್ಟ್ 12ಕ್ಕೆ ಮುಗಿದಿದೆ ಮತ್ತು ಕಾರ್ಖಾನೆಯೂ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಇದನ್ನು ಮುಂದುವರೆಸದೇ ಮತ್ತು ಅಲ್ಲಿ ನೀಲಗಿರಿ ತೋಪು ಬೆಳೆಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.

ಸರ್ಕಾರ ತಕ್ಷಣವೇ ಈ ನೆಡುತೋಪನ್ನು ವಶಪಡಿಸಿಕೊಂಡು ಇಲ್ಲಿ ಸ್ವಾಭಾವಿಕ ಅರಣ್ಯವನ್ನು ಬೆಳೆಸಬೇಕು. ಪರಿಸರ ಉಳಿಸಬೇಕು, ಮನುಷ್ಯನ ದುರಾಸೆಗೆ ಮತ್ತು ಅಭಿವೃದ್ದಿಯ ತಾಕಲಾಟದಲ್ಲಿ ಇಡೀ ಭೂಮಿಯೇ ನಾಶವಾಗುತ್ತಿದೆ. ಅದರಲ್ಲೂ ಗಣಿಗಾರಿಕೆ ಮತ್ತು ನಗರೀಕರಣ ವಿಸ್ತರಣೆಯಿಂದ ಕೃಷಿ ಭೂಮಿಯೇ ಇಲ್ಲವಾಗುತ್ತಿದೆ. ಹೀಗಾದರೆ ಮಾನವ ನಾಶವಾದಂತೆ ಸರಿ ಎಂದು ಹೇಳಿದರು.

ಸಭೆಯಲ್ಲಿ ಒಕ್ಕೂಟದ ಮುಖಂಡರಾದ ಕೆ.ಪಿ. ಶ್ರೀಪಾಲ್, ಕೆ.ಟಿ. ಗಂಗಾಧರ್, ಎಂ.ಗುರುಮೂರ್ತಿ, ಚಾರ್ವಕ ರಾಘು, ಶಶಿ ಸಂಪಳ್ಳಿ, ಅಖಿಲೇಶ್ ಚಿಪ್ಪಳಿ, ಸುರೇಶ್ ಶೆಟ್ಟಿ ಅರಸಾಳು, ಡಿ.ಮಂಜುನಾಥ್, ಟಿ.ಆರ್.ಕೃಷ್ಣಪ್ಪ, ಶಿವಮೂರ್ತಿ, ರಾಜೇಂದ್ರ ಕಂಬಳಗೆರೆ, ತೀರ್ಥಹಳ್ಳಿ, ಕಿರಣ್ , ಮಾಲತೇಶ್ ಭೊಮ್ಮನಕಟ್ಟೆ, ಪ್ರಸನ್ನ ಹಿತ್ತಲಗದ್ದೆ, ಪ್ರೀತಮ್ ದತ್ತರಾಜಪುರ, ಸಂದೀಪ ಅಕ್ಲಾಪುರ, ಅಕ್ಷತಾ ಹುಂಚದಕಟ್ಟೆ, ರಘು ಗರ್ಗೇಶ್ವರ, ಕೃಷ್ಣಮೂರ್ತಿ ಸೇರಿದಂತೆ ಹಲವರಿದ್ದರು.

ಫೋಟೋ ಮತ್ತು ವರದಿ: ಶಶಿ ಸಂಪಳ್ಳಿ
ಪತ್ರಕರ್ತರು ಮತ್ತು ಪರಿಸರ ಹೋರಾಟಗಾರರು
ಶಿವಮೊಗ್ಗ

Tags: BhadravatiBhadravati paper factoryshivamogga
ShareTweetSendShare
Join us on:

Related Posts

ವೈರಲ್ ಆಡಿಯೋದಿಂದ ರಾಜ್ಯ ಬಿಜೆಪಿಯಲ್ಲಿ ಸಂಚಲನ; ಡಿವಿಎಸ್ ಸ್ಪಷ್ಟನೆ

ಕಿಕ್ ಔಟ್ ಮಾಡಲು ನಾನೇನು ತಪ್ಪು ಮಾಡಿದ್ದೆ ಬಿಜೆಪಿಯಲ್ಲಿ ಆಡಿಯೋ ಬಾಂಬ್ ಸ್ಫೋಟ ಸದಾನಂದ ಗೌಡರ ನಡೆಯಿಂದ ಬೇಸತ್ತ ರಾಜ್ಯಾಧ್ಯಕ್ಷ

by Shwetha
July 2, 2026
0

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವದ ಸಂಘರ್ಷ ಮತ್ತು ಆಂತರಿಕ ಭಿನ್ನಮತ ಈಗ ಹೊಸ ರೂಪ ಪಡೆದುಕೊಂಡಿದೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆದ...

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

ನಮ್ಮ ಮೆಟ್ರೋ ಸೇವೆ ವ್ಯತ್ಯಯ; BMRCLಗೆ ತನಿಖೆಗೆ ಆದೇಶ

by Shwetha
July 2, 2026
0

ಬೆಂಗಳೂರು ನಮ್ಮ ಮೆಟ್ರೋ ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್...

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

ಬೆಂಗಳೂರಿನ ವಾಹನ ಸವಾರರಿಗೆ ಶಾಕ್; ನೈಸ್ ರಸ್ತೆಯ ಹೊಸ ಟೋಲ್ ದರ ಜಾರಿ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ಮಾರ್ಗಗಳಾದ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ (ಹೊಸೂರು ರಸ್ತೆ) ಹಾಗೂ...

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

ಗೃಹಜ್ಯೋತಿಗೆ ಜಾತಿ ಭೂತ: ಉಚಿತ ವಿದ್ಯುತ್ ನೀಡಲು ಜಾತಿ ಪ್ರಮಾಣಪತ್ರ ಕಡ್ಡಾಯ ಯಾಕೆ? – ಇದು ಯಾವ ಸೀಮೆ ಗ್ಯಾರಂಟಿ ಎಂದ ಆರ್ ಅಶೋಕ್!

by Shwetha
July 2, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡುವ ಈ ಯೋಜನೆಗೆ ಈಗ...

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಶಾಕ್; ಪ್ರಮುಖ ಟೋಲ್ ರಸ್ತೆಗಳಲ್ಲಿ ದರ ಏರಿಕೆ

by Shwetha
July 2, 2026
0

ಬೆಂಗಳೂರಿನ ವಾಹನ ಸವಾರರಿಗೆ ಮತ್ತೊಂದು ಬೆಲೆ ಏರಿಕೆ ಹೊರೆ ಎದುರಾಗಿದೆ. ನಗರದ ಪ್ರಮುಖ ಟೋಲ್ ರಸ್ತೆಗಳ ಬಳಕೆಯ ಶುಲ್ಕವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಹೊಸ ಟೋಲ್ ದರಗಳು ಜಾರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram