ಬೆಂಗಳೂರು : ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಮಾತನಾಡಿದ್ದ ಯತ್ನಾಳ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಸಮರ್ಥಿಸಿಕೊಂಡಿದ್ದು, ದೊರೆಸ್ವಾಮಿ ಅವರು ನಾಲಿಗೆ ಬಿಗಿಹಿಡಿದು ಮಾತನಾಡಬೇಕು ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೊರೆಸ್ವಾಮಿ ಅವರು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರಿಗೆ ಅವಹೇಳನ ಮಾಡುತ್ತಾರೆ. ನಮಗೆ ಸ್ವಾತಂತ್ರ್ಯಹೋರಾಟಗಾರರ ಮೇಲೆ ನಂಬಿಕೆಯಿದೆ. ಸ್ವಾತಂತ್ರ್ಯ ಹೋರಾಟಗಾರು ಇದ್ದಿದ್ದರೆ ಹೀಗೆ ಮಾತನಾಡುತ್ತಿದ್ದರಾ? ಎಂದು ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. “ದೊರೆಸ್ವಾಮಿ ಅವರು ನಾಲಿಗೆ ಬಿಗಿಹಿಡಿದು ಮಾತನಾಡಬೇಕು. ಯಾರು ಯಾರು ಏನೇನು ಮಾತನಾಡಿದ್ದಾರೆ ಎಂಬುದು ಗೊತ್ತಿದೆ. ವಯಸ್ಸಾಗಿದೆ ಅಂತ ಏನು ಬೇಕಾದರೂ ಮಾತನಾಡಬಹುದಾ? ನಮ್ಮಲ್ಲಿ ಹಠಮಾರಿ ಧೋರಣೆಯಿಲ್ಲ. ಪ್ರಧಾನಿ, ಅಂಬೇಡ್ಕರ್ ಬಗ್ಗೆ ಮಾತನಾಡಿದ್ರೆ ಸಹಿಸೋದಕ್ಕೆ ಆಗುತ್ತಾ” ಎಂದು ರೇಣುಕಾಚಾರ್ಯ ಅವರು ಹೇಳಿಕೆ ಕೊಟ್ಟಿದ್ದಾರೆ.
ಸ್ವಂತ ಅಭ್ಯರ್ಥಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಕೈ ಹಿಡಿದ ಮಮತಾ ಬ್ಯಾನರ್ಜಿ:ಬಿಜೆಪಿಯ ಕಮಲ ಬಾಡಿಸಲು ಕೈ ಜೊತೆಗೂಡಿದ ತೃಣಮೂಲ-ನಂದಿಗ್ರಾಮದ ರಣಕಣದಲ್ಲಿ ದೀದಿ ಹೊಸ ರಣತಂತ್ರಕ್ಕೆ ಬೆಚ್ಚಿಬಿದ್ದ ಕೇಸರಿ ಪಡೆ
ನಂದಿಗ್ರಾಮ: ಪಶ್ಚಿಮ ಬಂಗಾಳದ ಹೈವೋಲ್ಟೇಜ್ ಕ್ಷೇತ್ರ ನಂದಿಗ್ರಾಮದ ಉಪಚುನಾವಣೆಯಲ್ಲಿ ಈಗ ಅನಿರೀಕ್ಷಿತ ರಾಜಕೀಯ ತಿರುವು ಕಂಡುಬಂದಿದೆ. ತನ್ನ ಬಣದ ಅಭ್ಯರ್ಥಿಯೇ ಕಣದಿಂದ ಹಿಂದೆ ಸರಿದು ಆಘಾತ ನೀಡಿದ...








