ಬೆಂಗಳೂರು : ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಮಾತನಾಡಿದ್ದ ಯತ್ನಾಳ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಸಮರ್ಥಿಸಿಕೊಂಡಿದ್ದು, ದೊರೆಸ್ವಾಮಿ ಅವರು ನಾಲಿಗೆ ಬಿಗಿಹಿಡಿದು ಮಾತನಾಡಬೇಕು ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೊರೆಸ್ವಾಮಿ ಅವರು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರಿಗೆ ಅವಹೇಳನ ಮಾಡುತ್ತಾರೆ. ನಮಗೆ ಸ್ವಾತಂತ್ರ್ಯಹೋರಾಟಗಾರರ ಮೇಲೆ ನಂಬಿಕೆಯಿದೆ. ಸ್ವಾತಂತ್ರ್ಯ ಹೋರಾಟಗಾರು ಇದ್ದಿದ್ದರೆ ಹೀಗೆ ಮಾತನಾಡುತ್ತಿದ್ದರಾ? ಎಂದು ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. “ದೊರೆಸ್ವಾಮಿ ಅವರು ನಾಲಿಗೆ ಬಿಗಿಹಿಡಿದು ಮಾತನಾಡಬೇಕು. ಯಾರು ಯಾರು ಏನೇನು ಮಾತನಾಡಿದ್ದಾರೆ ಎಂಬುದು ಗೊತ್ತಿದೆ. ವಯಸ್ಸಾಗಿದೆ ಅಂತ ಏನು ಬೇಕಾದರೂ ಮಾತನಾಡಬಹುದಾ? ನಮ್ಮಲ್ಲಿ ಹಠಮಾರಿ ಧೋರಣೆಯಿಲ್ಲ. ಪ್ರಧಾನಿ, ಅಂಬೇಡ್ಕರ್ ಬಗ್ಗೆ ಮಾತನಾಡಿದ್ರೆ ಸಹಿಸೋದಕ್ಕೆ ಆಗುತ್ತಾ” ಎಂದು ರೇಣುಕಾಚಾರ್ಯ ಅವರು ಹೇಳಿಕೆ ಕೊಟ್ಟಿದ್ದಾರೆ.
ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್
ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...








