ಶಿವಮೊಗ್ಗ : ಮಲೆನಾಡು ಬಾಗದಲ್ಲಿ ಮಳೆ ಆರ್ಭಟ ಜೋರಾಗಿದೆ. ಅದ್ರಲ್ಲೂ ಶಿವಮೊಗ್ಗದಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ತುಂಗಾ ನದಿ ಮೈದುಂಬಿ ಹರಿಯುತ್ತಿದೆ. ತುಂಬಿ ಹರಿಯುತ್ತಿರುವ ತುಂಗೆಗೆ ಇಂದು ಸಚಿವ ಕೆ.ಎಸ್.ಈಶ್ವರಪ್ಪ ಇಂದು ಬಾಗಿನ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಕಳೆದೆರೆಡು ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆಯಿಂದಾಗಿ ತುಂಗಾ ಜಲಾಶಯ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಡ್ಯಾಂ ನಿಂದ ಹೊರಬಿಡಲಾಗುತ್ತಿದೆ. ಶಿವಮೊಗ್ಗ ನಗರದಲ್ಲಿ ತುಂಗಾ ನದಿ ಭರ್ತಿಯಾಗಿ ಹರಿಯುತ್ತಿದ್ದು, ಕೋರ್ಪಲಯ್ಯನ ಛತ್ರದ ಬಳಿಯ ಮಂಟಪ ಮುಳುಗಿ ಹೋಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಚಿವ ಕೆ.ಎಸ್. ಈಶ್ವರಪ್ಪ ಕುಟುಂಬ ಸಮೇತರಾಗಿ ತುಂಗಾ ನದಿಗೆ ಬಾಗಿನ ಅರ್ಪಿಸಿದರು. ತುಂಗಾ ನದಿ ಸಂಪೂರ್ಣವಾಗಿ ತುಂಬಿ ಹರಿಯುತ್ತಿರುವುದು ಸಂತಸ ತಂದಿದೆ. ಇನ್ನೂ ಕಳೆದ ಬಾರಿಯಂತೆ ಈ ಬಾರಿ ಮಳೆಯಿಂದ ಯಾವುದೇ ಅನಾಹುತ ಸಂಭವಿಸದಂತೆ ತುಂಗೆಗೆ ಬಾಗಿನ ಅರ್ಪಿಸಿ ಬೇಡಿಕೊಂಡಿದ್ದಾಗಿ ಈಶ್ವರಪ್ಪ ಅವರು ತಿಳಿಸಿದ್ದಾರೆ.
ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...








