ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಅತ್ಯಂತ ಪ್ರಾಚೀನ ಮತ್ತು ಅತ್ಯುತ್ಕೃಷ್ಟ ಔಷಧ ಸಸ್ಯ ಅತ್ತಿಯೆಂಬ ವಿಸ್ಮಯದ ಕಿರುಮಾಹಿತಿ

admin by admin
August 8, 2020
in Health, Newsbeat, ಆರೋಗ್ಯ
Share on FacebookShare on TwitterShare on WhatsappShare on Telegram

ಅತ್ಯಂತ ಪ್ರಾಚೀನ ಮತ್ತು ಅತ್ಯುತ್ಕೃಷ್ಟ ಔಷಧ ಸಸ್ಯ ಅತ್ತಿಯೆಂಬ ವಿಸ್ಮಯದ ಕಿರುಮಾಹಿತಿ

ಅತ್ತಿಯು ವೇದಕಾಲದಿಂದಲೂ ಬಳಕೆಯಲ್ಲಿರುವ ಒಂದು ಅದ್ಭುತ ಮೂಲಿಕಾ ಮರ. ಔಷಧೀಯ ಗುಣಗಳನ್ನು ಹೊಂದಿರುವ ಈ ಅತ್ತಿಯನ್ನು ಹಿಂದೂ ಧಾರ್ಮಿಕ ಯಜ್ಞಯಾಗಾದಿಗಳಲ್ಲೂ ಬಳಸುವ ವಾಡಿಕೆ ನಡೆದುಕೊಂಡು ಬಂದಿದೆ. ಇದರ ರೆಂಬೆಯನ್ನು ನಮ್ಮ ಪೂರ್ವಜರು ಹಲ್ಲುಜ್ಜಲು ಬಳಸುತ್ತಿದ್ದರು. ಆದರೆ ಅತ್ತಿಯ ಹಣ್ಣು ನೋಡಲು ಎಷ್ಟು ಸುಂದರವೋ ಅಷ್ಟೇ ಜಂತುಗಳನ್ನು ಅದರೊಳಗೆ ಕಾಣಬಹುದು.

Related posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

August 7, 2026
indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026

ಇದಕ್ಕೆ ಸಂಸ್ಕೃತದಲ್ಲಿ ಔದುಂಬರ, ತುಳುವಿನಲ್ಲಿ ಅರ್ತಿ, ಹಿಂದಿಯಲ್ಲಿ ಗೂಲರ್, ಇಂಗ್ಲೀಷ್ ನಲ್ಲಿ ಕ್ಲಸ್ಟರ್ ಫಿಗ್ ಎಂದೂ ಕರೆಯುತ್ತಾರೆ. ಅಪುಷ್ಪ, ಜಂತುಫಲ, ಸದಾಫಲ, ಶ್ವೇತವಲ್ಕಲ, ಕ್ಷೀರವೃಕ್ಷ, ಕ್ರಿಮಿಕಂಠ, ಬ್ರಹ್ಮವೃಕ್ಷ, ಹರಿತಾಕ್ಷ, ಹೇಮದುಗ್ಧ, ಶೀತಫಲ, ಸುಚಕ್ಷು, ಯಜ್ಞಫಲ ಎಂಬುದು ಅತ್ತಿಯ ಪರ್ಯಾಯ ಪದಗಳು. ಅತ್ಯಂತ ಜನಪ್ರಿಯವಾಗಿರುವ ಈ ಅತ್ತಿಮರವು 9 ರಿಂದ 12 ಮೀಟರ್ ಉದ್ದಕ್ಕೆ ಬೆಳೆಯುತ್ತದೆ. ಎಲೆ, ಫಲ, ಕಾಯಿ, ತೊಗಟೆಯಿಂದ ಬಿಳಿಬಣ್ಣದ ಅಂಟಾದ ದ್ರವ ಹೊರಬರುತ್ತದೆ. ಕಾಯಿ ಹಸಿರಾಗಿದ್ದು ಹಣ್ಣಾದಾಗ ಕೆಂಪುಬಣ್ಣಕ್ಕೆ ತಿರುಗುತ್ತದೆ. ಹಣ್ಣಿನ ಒಳಗಡೆ ಇರುವೆಗಳಿರುತ್ತವೆ. ಹಣ್ಣಿನ ಒಳಗಡೆ ನೂರಾರು ಸಣ್ಣ ಸಣ್ಣ ಬೀಜಗಳಿರುತ್ತವೆ. ಭಾರತ ಹಾಗೂ ಶ್ರೀಲಂಕಾಗಳಲ್ಲಿ ಇದು ಅತೀ ಹೆಚ್ಚಾಗಿ ಬೆಳೆಯುತ್ತವೆ.

ಇನ್ನು ಈ ಅತ್ತಿಯಲ್ಲಿ ಮೂರು ವಿಧಗಳಿವೆ. ಅವುಗಳೆಂದರೆ ಉದುಂಬರ, ಕಾಕ ಉದುಂಬರ, ನದ್ಯೋದುಂಬರ. ಇವನ್ನು ಸಸ್ಯಶಾಸ್ತ್ರದಲ್ಲಿ ಫಿಕಸ್ ಗ್ಲೋಮೆರೇಟಾ, ಫಿಕಸ್ ಹಿಸ್ಪಿಡಾ, ಫಿಕಸ್ ಕರಿಕಾ ಎಂದು ಕರೆಯುತ್ತಾರೆ. ಈ ಮರದ ತೊಗಟೆ, ಕಾಯಿ, ಹಣ್ಣು, ಬೇರು ಔಷಧೀಯ ಅಂಶಗಳನ್ನು ಒಳಗೊಂಡಿರುತ್ತವೆ.

ಇದರ ಉಪಯೋಗಗಳತ್ತ ನೋಡುವುದಾದರೆ, ಮಧುಮೇಹ ಸಮಸ್ಯೆಯಿರುವವರು ಅತ್ತಿ ಹಣ್ಣು ಮತ್ತು, ನೇರಳೆ ಹಣ್ಣಿನ ಬೀಜದ ಚೂರ್ಣವನ್ನು ಸಮಪ್ರಮಾಣದಲ್ಲಿ ಮಿಶ್ರಣ ಮಾಡಿ ಸೇವಿಸಬೇಕು. ಅತ್ತಿಯ ತೊಗಟೆಯ ಭಸ್ಮವನ್ನು ಜೇನುತುಪ್ಪ ಮತ್ತು ತುಪ್ಪದೊಂದಿಗೆ ಸೇರಿಸಿ ಸೇವಿಸುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ. ಇದರ ಎಲೆ, ಫಲ ಮತ್ತು ಚಕ್ಕೆಯ ಚೂರ್ಣಕ್ಕೆ ಸಮಾನ ಪ್ರಮಾಣದಷ್ಟು ಜ್ಯೇಷ್ಠಮಧು ಚೂರ್ಣವನ್ನು ಸೇರಿಸಿ ಅದಕ್ಕೆ ಅತ್ತಿ ಎಲೆಗಳ ಸರ ಸೇರಿಸಿ ಸೇವಿಸುವುದರಿಂದ ಕೆಮ್ಮು ಮತ್ತು ಉಬ್ಬಸ ರೋಗಗಳು ಗುಣವಾಗುವುದು. ಅತ್ತಿಯ ಹಾಲಿಗೆ ಸಕ್ಕರೆ ಸೇರಿಸಿ ಕುಡಿಯುವುದರಿಂದ ಅತಿಸಾರ ರೋಗವು ನಿವಾರಣೆಯಾಗುತ್ತದೆ. ಅತ್ತಿಹಣ್ಣನ್ನು ತಿನ್ನುವುದರಿಂದ ಅಶಕ್ತತೆ ಮತ್ತು ಸ್ನಾಯುಗಳ ದೌರ್ಬಲ್ಯ ನಿವಾರಣೆಯಾಗುತ್ತದೆ.

ಮಾಹಿತಿ ಮತ್ತು ಲೇಖನ:- ಅಂಬಿಕಾ ಸೀತೂರು

Tags: Arti in TuluAyurvedabengaluruCluster Fig in EnglishGooler in Hindiindiakarnatakamedicinal plant.Oudumbara in SanskritSri Lanka
ShareTweetSendShare
Join us on:

Related Posts

indina-rashi-bhavishya-12-rashigala-phala-pandit-gyaneshwar-rao-astrology-katilu-durgaparameshwari-remedies

astro-ಜಗನ್ಮಾತೆ ಆದಿಶಕ್ತಿ ಚಾಮುಂಡೇಶ್ವರೀ ತಾಯಿ ಆಶೀರ್ವಾದ ಪಡೆಯುತ್ತಾ ದಿನ ಭವಿಷ್ಯ..

by admin
August 7, 2026
0

    ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು...

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram