ಬೆಳಗಾವಿ: ಖಾನಾಪುರ, ಬೈಲಹೊಂಗಲ ಪ್ರದೇಶಗಳಲ್ಲಿ ಮಳೆ ಆರ್ಭಟ ಕೊಂಚ ಕಡಿಮೆಯಾಗಿದೆ. ನವಿಲುತೀರ್ಥ ಅಣೆಕಟ್ಟಿನ ಒಳಹರಿವಿನಲ್ಲೂ ಇಳಿಕೆಯಾಗಿದೆ. ಆದರೂ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿರುವ ಜಿಲ್ಲಾಡಳಿತ ನವಿಲುತೀರ್ಥ ಆಣೆಕಟ್ಟಿನಿಂದ ಸುಮಾರು 300 ಕ್ಯೂಸೆಕ್ ನೀರು ಬಿಡಗಡೆಗೆ ಸಿದ್ಧತೆ ನಡೆಸಿಕೊಂಡಿದೆ. ಆಣೆಕಟ್ಟಿನಿಂದ ನೀರನ್ನು ಮಲಪ್ರಭಾ ನದಿಗೆ ಬಿಡಲು ತಯಾರಿ ನಡೆಸಿಕೊಳ್ಳಲಾಗಿದೆ. ಈ ಹಿನ್ನೆಲೆ ಈಗಾಗಲೇ ನದಿ ತೀರದ ಗ್ರಾಮಗಳ ಜನರಿಗೆ ಎಚ್ಚರದಿಂದ ಇರುವಂತೆ ಮುನ್ಸೂಚನೆ ನೀಡಲಾಗಿದೆ.
ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ
ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...








