ಬಾಗಲಕೋಟೆ : ಬಾಗಲಕೋಟೆಯಲ್ಲಿ ಮಹಾಮಳೆಗೆ ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ನದಿ ಪಾತ್ರದ ಜನರಲ್ಲಿ ಇದೀಗ ಪ್ರವಾಹದ ಭೀತಿ ಎದುರಾಗಿದೆ. ನದಿತಟದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಡಂಗೂರ ಸಾರಿಸುವ ಚೊಳಚಗುಡ್ಡ ಗ್ರಾಮಸ್ಥರಲ್ಲಿ ಈ ಕುರಿತಾಗಿ ಜಾಗೃತಿ ಮೂಡಿಸಲಾಗಿದೆ. ಇನ್ನೂ ಮಲಪ್ರಭಾ ನದಿ ತಟದಲ್ಲಿರುವ ಚೊಳಚಗುಡ್ಡ ಗ್ರಾಮ ಕಳೆದ ವರ್ಷ ಸಂಭವಿಸಿದ್ದ ಪ್ರವಾಹದಲ್ಲೂ ತತ್ತರಿಸಿಹೋಗಿತ್ತು. ಕಳೆದ ವರ್ಷದ ಪ್ರವಾಹಕ್ಕೆ ತುತ್ತಾಗಿ ಅನೇಕ ಅನಾಹುತಗಳಿಗೆ ಸಾಕ್ಷಿಯಾಗಿತ್ತು. ಇದೀಗ ಮತ್ತೆ ಗ್ರಾಮದ ಜನರಲ್ಲು ಪ್ರವಾಹದ ಆತಂಕ ಮನೆಮಾಡಿದೆ.
ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ: ಯದುವೀರ್ ಒಡೆಯರ್
ಯದುವೀರ್ ಒಡೆಯರ್ ಅವರು ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಕಂಬಳ ಆಯೋಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿದ ಅವರು, ಕಂಬಳವು ಕರಾವಳಿ ಭಾಗದ ವಿಶಿಷ್ಟ ಸಂಸ್ಕೃತಿ,...







