ಮೈಸೂರು: ಆನೆ ದಾಳಿಯಿಂದ ಮಾವುತನೋರ್ವ ಸಾವನಪ್ಪಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ. ಮಾವುತ ಹರೀಶ್ ಆನೆ ದಾಳಿಯಿಂದ ಮೃತಪಟ್ಟಿದ್ದು, ಮೃತದೇಹವನ್ನು ಮೃಗಾಲಯಕ್ಕೆ ರವಾನೆ ಮಾಡಲಾಗಿದೆ. ಆನೆ ದಾಳಿಗೆ ಒಳಗಾದ ತಕ್ಷಣವೇ ಹರೀಶ್ ರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾದೇ ಮಾವುತ ಪ್ರಾಣ ಬಿಟ್ಟಿದ್ದು, ಮೃತದೇಹವನ್ನು ನೇರವಾಗಿ ಮೃಗಾಲಯಕ್ಕೆ ರವಾನಿಸಲಾಗಿದೆ. ಮಾವುತನ ಮೃತದೇಹವಿಡಲು ಮೃಗಾಲಯದ ಹೊರಗಡೆ ವ್ಯವಸ್ಥೆ ಮಾಡಲಾಗಿದ್ದು, ಮೃತದೇಹ ಕಂಡ ತಕ್ಷಣ ಮೃಗಾಲಯದ ಸಿಬ್ಬಂದಿ ಕಣ್ಣಿರು ಹಾಕಿದ್ದಾರೆ. ಇನ್ನೂ ಮೃತ ಮಾವುತನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಲೋಕಾಯುಕ್ತ ಬಲೆಗೆ ಕೆಐಎಡಿಬಿ ಬಿಗ್ ಫಿಶ್: 15 ಲಕ್ಷ ರೂ ಲಂಚ ಪಡೆಯುವಾಗ ಕೆಎಎಸ್ ಅಧಿಕಾರಿ ನಾಗಪ್ರಶಾಂತ್ ಬಂಧನ
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು ಇಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿಶೇಷ ಸಹಾಯಕ...








