ಚಾಮರಾಜನಗರ: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಚಾಮರಾಜನಗರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದ್ದು, ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ಅನ್ನದಾತರು ರೈತರಿಗೆ ಮಾರಕವಾಗಿರುವ ಕಾಯ್ದೆ ತರಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮುಂದಾಗಿವೆ ಎಂದು ಆರೋಪಿಸಿ ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ಇದೇ ವೇಳೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗಗ್ರಹಿಸಿದ್ದಾರೆ.
ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ
ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....








