ಕೊರೊನಾ ಪಾಸಿಟಿವ್ ಇರುವುದು ಧೃಡವಾದ ಬಳಿಕ ಇಷ್ಟುದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಬಿ. ಎಸ್ ಯಡಿಯೂರಪ್ಪ ಅವರು ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದು, ಇಂದು ಸಂಜೆ 4 ಗಂಟೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಆಗಸ್ಟ್ 2ರಂದು ಕೊರೋನಾ ಪಾಸಿಟೀವ್ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಕುರಿತಂತೆ ಆಸ್ಪತ್ರೆ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಕಳೆದ 9 ದಿನಗಳಿಂದ ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಸಿಎಂ ಯಡಿಯೂರಪ್ಪ ಅವರು ಇದೀಗ ಗುಣಮುಖರಾಗಿದ್ದಾರೆ. ಮತ್ತೆ ವೈದ್ಯಕೀಯ ಪರೀಕ್ಷೆಗೆಒಳಪಡಿಸಿದ ವೇಳೆ ಸಿಎಂ ಬೆಸ್ ವೈ ಅವರ ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದೆ ಎನ್ನಲಾಗಿದೆ. ಹೀಗಾಗಿ ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದು, ರಾಜಾಹುಲಿ ಬೆಂಬಲಿಗರಲ್ಲಿ ಸಂತಸ ಮನೆ ಮಾಡಿದೆ.
ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ
ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....








