ಕೊರೊನಾ ಪಾಸಿಟಿವ್ ಇರುವುದು ಧೃಡವಾದ ಬಳಿಕ ಇಷ್ಟುದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಬಿ. ಎಸ್ ಯಡಿಯೂರಪ್ಪ ಅವರು ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದು, ಇಂದು ಸಂಜೆ 4 ಗಂಟೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಆಗಸ್ಟ್ 2ರಂದು ಕೊರೋನಾ ಪಾಸಿಟೀವ್ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಕುರಿತಂತೆ ಆಸ್ಪತ್ರೆ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಕಳೆದ 9 ದಿನಗಳಿಂದ ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಸಿಎಂ ಯಡಿಯೂರಪ್ಪ ಅವರು ಇದೀಗ ಗುಣಮುಖರಾಗಿದ್ದಾರೆ. ಮತ್ತೆ ವೈದ್ಯಕೀಯ ಪರೀಕ್ಷೆಗೆಒಳಪಡಿಸಿದ ವೇಳೆ ಸಿಎಂ ಬೆಸ್ ವೈ ಅವರ ಕೊರೊನಾ ರಿಪೋರ್ಟ್ ನೆಗೆಟಿವ್ ಬಂದಿದೆ ಎನ್ನಲಾಗಿದೆ. ಹೀಗಾಗಿ ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದು, ರಾಜಾಹುಲಿ ಬೆಂಬಲಿಗರಲ್ಲಿ ಸಂತಸ ಮನೆ ಮಾಡಿದೆ.
80 ಲಕ್ಷದ ವಾಚ್ ಅಲ್ಲ ಇದು ಅಂಬೇಡ್ಕರ್ ಚಿತ್ರವಿರುವ ಎಚ್ ಎಂಟಿ ವಾಚ್ ಅನುಮಾನವಿದ್ದರೆ ಮನೆಗೆ ಎಸ್ಐಟಿ ಕಳಿಸಿ ಎಂದು ಕುಮಾರಸ್ವಾಮಿ ಸವಾಲು
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಐಷಾರಾಮಿ ವಾಚ್ ಗಳ ಬಗ್ಗೆ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ತಿರುಗೇಟು ನೀಡಿದ್ದಾರೆ. ಇತ್ತೀಚೆಗೆ...








