ಮಂಡ್ಯ: ಕೊಡಗಿನಲ್ಲಿ ಮಳೆ ಆರ್ಭಟ ಕಡಿಮೆಯಾದ ಹಿನ್ನೆಲೆ ಕೆಆರ್ ಎಸ್ ಜಲಾಶಯದಲ್ಲೂ ಒಳಹರಿವು ತಗ್ಗಿದೆ. 77ಸಾವಿರದಿಂದ 70 ಸಾವಿರಕ್ಕೆ ಒಳಹರಿವಿನ ಪ್ರಮಾಣದಲ್ಲಿ ಇಳಿಳಿಕೆಯಾಗಿರುವುದು ಕಂಡುಬಂದಿದೆ. ಜಲಾಶಯದ ಹೊರ ಹರಿವಿನಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. 74 ಸಾವಿರ ಕ್ಯೂಸೆಕ್ ನಿಂದ 27 ಸಾವಿರ ಕ್ಯೂಸೆಕ್ ಗೆ ಹೊರ ಹರಿವಿನ ಪ್ರಮಾಣದಲ್ಲಿ ಕಡಿಮೆಯಾಗಿರುವ ಪರಿಣಾಮ ನದಿ ತೀರದ ಜನರಲ್ಲಿ ಪ್ರವಾಹದ ಆತಂಕ ಕಡಿಮೆಯಾಗಿದೆ. ಆದರೂ ಸಹ ಮುಂಜಾಗ್ರತಾ ಕ್ರಮವಾಗಿ ನದಿಯತ್ತ ಸುಳಿಯಂತೆ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಮೋದಿಗೆ ಸಾಮಾನ್ಯ ಜ್ಞಾನವಿಲ್ಲ ತಿಲಕ ಇಡುವ ಕೇಸರಿ ಬರುವುದೂ ಮುಸ್ಲಿಂ ರಾಷ್ಟ್ರಗಳಿಂದಲೇ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನಿಷ್ಠ ಸಾಮಾನ್ಯ ಪ್ರಜ್ಞೆಯೂ ಇಲ್ಲ ಎಂದು ನೇರವಾಗಿ ಟೀಕಿಸಿದ್ದಾರೆ. ಅಲ್ಪಸಂಖ್ಯಾತರ...








