ಚಾಮರಾಜನಗರ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷರಾದ ಹೊನ್ನೂರು ಪ್ರಕಾಶ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರದ ನೀತಿಯನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ಜಿಲ್ಲಾ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಹಲವಾರು ದಿನಗಳಿಂದ ಸರ್ಕಾರ ಹಾಗೂ ಜಿಲ್ಲಾಡಳಿತ ಮುಂದೆ ಹಲವಾರು ಬೇಡಿಕೆಗಳನ್ನು ಇಟ್ಟು ಈಡೇರಿಸುವಂತೆ ಎಷ್ಟೇ ಒತ್ತಾಯಿಸಿದ್ರು ಈ ಬಗ್ಗೆ ತಲೆ ಕೆಡಿಸಿಕೊಳ್ಳದ ಹಿನ್ನೆಲೆ ಇಂದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಪ್ರಮುಖವಾಗಿ ರೈತ ವಿರೋಧಿ ಕಾನೂನುಗಳು, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ , ತೆರಕಣಾಂಬಿ ಪ್ರಥಮ ದರ್ಜೆ ಕಾಲೇಜು ಸ್ಥಳಾಂತರವನ್ನು ರದ್ದು ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ವಿರೋಧಿ ಚಳುವಳಿ ನಡೆಸಿದ ರೈತರನ್ನು ಜಿಲ್ಲಾಡಳಿತ ಭವನ ಮುಂದೆ ಪೋಲಿಸರು ಬಂಧಿಸಿದ್ದಾರೆ
ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!
ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...








