ಡಿಜೆ ಹಳ್ಳಿ ಗಲಭೆ ವೇಳೆ ನಡೆದ ಗೋಲಿಬಾರ್ ನಲ್ಲಿ ಮೂವರು ಮೃತಪಟ್ಟ ಹಿನ್ನೆಲೆ, ಬೌರಿಂಗ್ ಆಸ್ಪತ್ರೆ ಹಾಗೂ ಶಿವಾಜಿನಗರದ ಸುತ್ತಮುತ್ತ ಪೊಲೀಸ್ ಹೈ ಪ್ರೊಟೆಕ್ಷನ್ ನೀಡಲಾಗಿದೆ. ಬ್ಯಾರಿಕೇಡ್ ಹಾಕಿ ಶಿವಾಜಿನಗರದಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಕೋವಿಡ್ ರ್ಯಾಂಡಮ್ ಟೆಸ್ಟ್ ಬಳಿಕ , ಫರನಿಕ್ಸ್ ತಜ್ಞ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಲಿದ್ದು, ಮರಣೋತ್ತರ ಪರೀಕ್ಷೆ ನಂತರ ಮೃತದೇಹಗಳ ರವಾನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಇನ್ನೂ ಸಬ್ ಡಿವಿಜನ್ ಮ್ಯಾಜಿಸ್ಟ್ರೇಟ್ ನಲ್ಲಿ ಆದೇಶದ ಬಳಿಕ ಮೃತದೇಹಗಳ ಹಸ್ತಾಂತರ ಮಾಡಲಾಗುವುದು. ಹೀಗಾಗಿ ಈ ವೇಳೆ ಯಾವುದೇ ಗಲಭೆ ಉಂಟಾಗದಂತೆ ಸಂಚಾರಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮೃತದೇಹ ಹಸ್ತಾಂತರದ ಬಳಿಕ ಶವಸಂಸ್ಕಾರ ಆಗುವವರೆಗೂ ಪೊಲೀಸರು ಹೈ ಪ್ರೊಟೆಕ್ಷನ್ ನೀಡಲಿದ್ದಾರೆ.
ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ
ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...








