ನವದೆಹಲಿ : ನಿರ್ಭಯಾ ಪ್ರಕರಣದ ದೋಷಿ ಪವನ್ ಗುಪ್ತ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿದ್ದಾರೆ. ನಿರ್ಭಯಾ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ನಾಲ್ವರು ದೋಷಿಗಳು ಗಲ್ಲುಶಿಕ್ಷೆ ವಿಳಂಬಕ್ಕೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ದೋಷಿಗಳ ಪೈಕಿ ಪವನ್ ಕುಮಾರ್ ಗುಪ್ತ ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದ. ಇದನ್ನು ರಾಷ್ಟ್ರಪತಿಗಳು ಇಂದು ತಿರಸ್ಕರಿಸಿದ್ದಾರೆ. ರಾಷ್ಟ್ರಪತಿಗಳು ದೋಷಿಗಳಾದ ವಿನಯ್ ಕುಮಾರ್, ಅಕ್ಷಯ್ ಠಾಕೂರ್, ಮುಖೇಶ್ ಸಿಂಗ್ ಅವರ ಕ್ಷಮಾದಾನ ಅರ್ಜಿಯನ್ನು ಈಗಾಗಲೇ ವಜಾಗೊಳಿಸಿದ್ದಾರೆ. ಇನ್ನು ನಾಲ್ವರು ಅಪರಾಧಿಗಳ ಎಲ್ಲಾ ಕಾನೂನು ರಹದಾರಿಗಳು ಅಂತ್ಯವಾಗಿದೆ. ಅಲ್ಲದೆ ಮುಂದಿನ ಹದಿನೈದು ದಿನಗಳಲ್ಲಿ ಅವರನ್ನು ಗಲ್ಲಿಗೇರಿಸುವ ಸಾಧ್ಯತೆ ಇದೆ.
ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ
ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷಕ್ಕೆ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ಪೋಷಕರಿಗೆ ಶಾಕಿಂಗ್ ಸುದ್ದಿಯೊಂದು ಎದುರಾಗಿದೆ. ಇತ್ತೀಚಿನ ತೈಲ ಬೆಲೆ ಏರಿಕೆಯು ನೇರವಾಗಿ ಶಾಲಾ ಮಕ್ಕಳ ಸಾರಿಗೆಯ ಮೇಲೆ...








