ಬೆಂಗಳೂರು: ಕಂಬಳದ ಉಸೇನ್ ಬೋಲ್ಟ್ ಶ್ರೀನಿವಾಸಗೌಡ ಕುರಿತಾದ ಸಿನಿಮಾ ಇದೇ ಯುಗಾದಿ ಹಬ್ಬದಂದು ಸೆಟ್ಟೇರಲಿದೆ. ಕನ್ನಡ ಮತ್ತು ತುಳು ಭಾಷೆಗಳಲ್ಲಿ ಈ ಸಿನಿಮಾ ಸೆಟ್ಟೆರಲಿದ್ದು, ಸುಮಾರು 2.5 ಕೋಟಿ ರೂ ವೆಚ್ಚದಲ್ಲಿ ಚಿತ್ರ ನಿರ್ಮಾಣವಾಗಲಿದೆ ಎನ್ನಲಾಗಿದೆ. ನಿರ್ಮಾಪಕ ಲೋಕೇಶ್ ಶೆಟ್ಟಿ ಮುಚ್ಚೂರು ಅವರ ಲೆಮನ್ ಗ್ರಾಸ್ ಸ್ಟುಡಿಯೋ ಪ್ರೊಡಕ್ಷನ್ನಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು ಇದಕ್ಕಾಗಿ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ನೋಂದಾಯಿಸಲಾಗಿದೆ. ಡಾ. ನಿಖಿಲ್ ಮಂಜು ಈ ಚಿತ್ರ ನಿರ್ದೇಶಕರಾಗಿದ್ದು, ತುಮುಲ್ ಬಾಲ್ಯನ್ ಪ್ರಧಾನ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಈ ಸಿನಿಮಾದಲ್ಲಿ ನಿರ್ದೇಶಕರು ಶ್ರೀನಿವಾಸಗೌಡ ಅವರ ಜೊತೆಗೆ 6 ಕಂಬಳ ಜಾಕಿಗಳನ್ನು ತೆರೆಯ ಮೇಲೆ ತರಲಿದ್ದಾರೆ. ನಿಶಾಂತ್ ಶೆಟ್ಟಿ, ಸುರೇಶ್ ಶೆಟ್ಟಿ ಹುಕ್ಕೇರಿ, ಆನಂದ್ ಇರ್ವತ್ತೂರು, ಆಲದಂಗಡಿ ರವಿಕುಮಾರ್ ಮತ್ತು ಪ್ರವೀಣ್ ಪಣಪಿಲ್ ಇರಲಿದ್ದಾರೆ.
ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ...







