ಶಿವಮೊಗ್ಗ: ಇಂದು ಬೆಳಗ್ಗೆ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋದಾ ಬೆನ್ ಅಲ್ಲಿಂದ ನೇರವಾಗಿ ಶಿವಮೊಗ್ಗದ ಶ್ರೀ ರಾಮಚಂದ್ರಾಪುರ ಮಠಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ. ರಾಮಚಂದ್ರಾಪುರ ಮಠದ ಆವರಣದಲ್ಲಿ ರಾಘವೇಶ್ವರ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಕೃಷ್ಣಾರ್ಪಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಜಶೋದಾ ಬೆನ್ ಅವರು ಇಲ್ಲಿಗೆ ಭೇಟಿ ನೀಡಿದ್ದರು. ಮಠಕ್ಕೆ ಆಗಮಿಸಿದ ಜಶೋದಾ ಬೆನ್ ಮೋದಿ ನೇರವಾಗಿ ಗೋವರ್ಧನಗಿರಿಗೆ ತೆರಳಿ ಗೋಪಾಲಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರದಕ್ಷಿಣೆ ಹಾಕಿದರು. ಬಳಿಕ ಕೃಷ್ಣಾರ್ಪಣ ಕಾರ್ಯಕ್ರಮದ ವೇದಿಕೆಗೆ ಆಗಮಿಸಿದರು. ಈ ವೇಳೆ ಮಾತನಾಡಿದ ಅವರು, “ಶ್ರೀರಾಘವೇಶ್ವರ ಸ್ವಾಮೀಜಿಯಲ್ಲಿ ನಾನು ಆದಿ ಶಂಕರಾಚಾರ್ಯರನ್ನು ಕಂಡೆ” ಎನ್ನುತ್ತಾ ಶಂಕರಾಚಾರ್ಯರ ಕಾಲಿಗೆ ಮೊಸಳೆ ಕಚ್ಚಿದ ಕಥೆಯನ್ನು ನೆನಪಿಸಿಕೊಂಡರು.
ಕಾಂಗ್ರೆಸ್ ಜನಪ್ರಿಯತೆ ಕಂಡು ಕೇಂದ್ರಕ್ಕೆ ಹೊಟ್ಟೆಕಿಚ್ಚು:ಸತೀಶ್ ಜಾರಕಿಹೊಳಿ ಇಡಿ ದಾಳಿ ಕೇವಲ ಆರಂಭವಷ್ಟೇ ನನ್ನ ಮತ್ತು ಡಿಕೆಶಿ ಮೇಲೆ ದಾಳಿ ಗ್ಯಾರಂಟಿ ಎಂದ ಪ್ರಿಯಾಂಕ್ ಖರ್ಗೆ
ರಾಜ್ಯ ರಾಜಕಾರಣದಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಈಗ ಹೊಸ ಸಂಚಲನ ಮೂಡಿಸಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ಬೆನ್ನಲ್ಲೇ ಈಗ ಮತ್ತಷ್ಟು ಕಾಂಗ್ರೆಸ್ ಸಚಿವರ ಮೇಲೆ ಇಡಿ...








