ಶಿವಮೊಗ್ಗ: ಇಂದು ಬೆಳಗ್ಗೆ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋದಾ ಬೆನ್ ಅಲ್ಲಿಂದ ನೇರವಾಗಿ ಶಿವಮೊಗ್ಗದ ಶ್ರೀ ರಾಮಚಂದ್ರಾಪುರ ಮಠಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ. ರಾಮಚಂದ್ರಾಪುರ ಮಠದ ಆವರಣದಲ್ಲಿ ರಾಘವೇಶ್ವರ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಕೃಷ್ಣಾರ್ಪಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಜಶೋದಾ ಬೆನ್ ಅವರು ಇಲ್ಲಿಗೆ ಭೇಟಿ ನೀಡಿದ್ದರು. ಮಠಕ್ಕೆ ಆಗಮಿಸಿದ ಜಶೋದಾ ಬೆನ್ ಮೋದಿ ನೇರವಾಗಿ ಗೋವರ್ಧನಗಿರಿಗೆ ತೆರಳಿ ಗೋಪಾಲಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರದಕ್ಷಿಣೆ ಹಾಕಿದರು. ಬಳಿಕ ಕೃಷ್ಣಾರ್ಪಣ ಕಾರ್ಯಕ್ರಮದ ವೇದಿಕೆಗೆ ಆಗಮಿಸಿದರು. ಈ ವೇಳೆ ಮಾತನಾಡಿದ ಅವರು, “ಶ್ರೀರಾಘವೇಶ್ವರ ಸ್ವಾಮೀಜಿಯಲ್ಲಿ ನಾನು ಆದಿ ಶಂಕರಾಚಾರ್ಯರನ್ನು ಕಂಡೆ” ಎನ್ನುತ್ತಾ ಶಂಕರಾಚಾರ್ಯರ ಕಾಲಿಗೆ ಮೊಸಳೆ ಕಚ್ಚಿದ ಕಥೆಯನ್ನು ನೆನಪಿಸಿಕೊಂಡರು.
Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?
bengaluru tuluvera chavadi - gunaranjan shetty ಬೆಂಗಳೂರು- ಕರಾವಳಿಯ ಸಂಸ್ಕøತಿ, ಪರಂಪರೆ ಮತ್ತು ಪದ್ಧತಿಯ ಭಾಗವಾಗಿರುವ ಕಂಬಳ ತುಳುನಾಡಿನ ಸೀಮೆಯನ್ನು ದಾಟಿ ಹೋಗಬಾರದು ಎಂದು ಡಾ....








