ರಾಮನಗರ : ಬಿಡದಿಯ ನಿತ್ಯಾನಂದ ಸ್ವಾಮಿ ರಾಮನಗರ ನ್ಯಾಯಾಲಯದ ವಿಚಾರಣೆಗೆ ಪ್ರತಿ ಬಾರಿ ಗೈರಾಗುತ್ತಿರುವ ಹಿನ್ನೆಲೆಯಲ್ಲಿ ಆತನಿಗೆ ಸೇರಿದ ಆಸ್ತಿಗಳನ್ನು ಪರಿಶೀಲನೆ ಮಾಡಿ ಮುಟ್ಟಗೋಲು ಹಾಕಿಕೊಳ್ಳಲು ಸಿಐಡಿ ಅಧಿಕಾರಿಗಳಿಗೆ ರಾಮನಗರ ನ್ಯಾಯಾಲಯ ಸೂಚನೆ ನೀಡಿದೆ. ಇಂದು ನಿತ್ಯಾನಂದನ ರಾಸಲೀಲೆ ಪ್ರಕರಣದ ವಿಚಾರಣೆಗೆ ಒಂದನೇ ಆರೋಪಿ ನಿತ್ಯಾನಂದ, ಎರಡನೇ ಆರೋಪಿ ಗೋಪಾಲ ಶೀಲಂ ರೆಡ್ಡಿ ಇಬ್ಬರು ಸೇರಿದಂತೆ ಎಲ್ಲಾ ಆರೋಪಿಗಳು ಗೈರಾಗಿದ್ದರು. ದೂರುದಾರ ಲೆನಿನ್ ನ್ಯಾಯಾಲಯದಲ್ಲಿ ಹಾಜರಿದ್ದರು. ನ್ಯಾಯಾಲಯಕ್ಕೆ ಆರೋಪಿಗಳು ಗೈರಾದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಇದೇ ತಿಂಗಳ 23 ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ. ಇನ್ನು ಅಧಿಕಾರಿಗಳು ಆಸ್ತಿಗಳನ್ನು ಪರಿಶೀಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ನಂತರ ಕೋರ್ಟ್, ಜಿಲ್ಲಾಧಿಕಾರಿಗಳಿಗೆ ನಿತ್ಯಾನಂದನ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ನೀಡಲಿದೆ.
ಹೇ..ಪಾಕ್..! ನನ್ನ ನೀನು ಗೆಲ್ಲಲಾರೆ… ತಿಳಿದು ತಿಳಿದು ಛಲವೇತಕೆ…ಕಪಟ ನಾಟಕವನ್ನು ಬಿಟ್ಟು ಬಿಡು..!
ಭರತ ಖಂಡದಲ್ಲಿ ದಾಯಾದಿಗಳ ಕದನ ಇನ್ನು ನಿನ್ನೆಯದಲ್ಲ. ಮಹಾಭಾರತದ ಕುರುಕ್ಷೇತ್ರದಿಂದ ಇಂದಿನ ಗಡಿ ವಿವಾದದ ತನಕದ ಇತಿಹಾಸವನ್ನು ನೋಡಿದಾಗ ದಾಯಾದಿ ಕಲಹ ಬಿಡಿಸಲಾಗದ ಒಗ್ಗಟ್ಟಿನಂತಿದೆ. ಅದು ರಾಜ್ಯವಂಶಸ್ಥರು...








