ರಾಮನಗರ : ಬಿಡದಿಯ ನಿತ್ಯಾನಂದ ಸ್ವಾಮಿ ರಾಮನಗರ ನ್ಯಾಯಾಲಯದ ವಿಚಾರಣೆಗೆ ಪ್ರತಿ ಬಾರಿ ಗೈರಾಗುತ್ತಿರುವ ಹಿನ್ನೆಲೆಯಲ್ಲಿ ಆತನಿಗೆ ಸೇರಿದ ಆಸ್ತಿಗಳನ್ನು ಪರಿಶೀಲನೆ ಮಾಡಿ ಮುಟ್ಟಗೋಲು ಹಾಕಿಕೊಳ್ಳಲು ಸಿಐಡಿ ಅಧಿಕಾರಿಗಳಿಗೆ ರಾಮನಗರ ನ್ಯಾಯಾಲಯ ಸೂಚನೆ ನೀಡಿದೆ. ಇಂದು ನಿತ್ಯಾನಂದನ ರಾಸಲೀಲೆ ಪ್ರಕರಣದ ವಿಚಾರಣೆಗೆ ಒಂದನೇ ಆರೋಪಿ ನಿತ್ಯಾನಂದ, ಎರಡನೇ ಆರೋಪಿ ಗೋಪಾಲ ಶೀಲಂ ರೆಡ್ಡಿ ಇಬ್ಬರು ಸೇರಿದಂತೆ ಎಲ್ಲಾ ಆರೋಪಿಗಳು ಗೈರಾಗಿದ್ದರು. ದೂರುದಾರ ಲೆನಿನ್ ನ್ಯಾಯಾಲಯದಲ್ಲಿ ಹಾಜರಿದ್ದರು. ನ್ಯಾಯಾಲಯಕ್ಕೆ ಆರೋಪಿಗಳು ಗೈರಾದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಇದೇ ತಿಂಗಳ 23 ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ. ಇನ್ನು ಅಧಿಕಾರಿಗಳು ಆಸ್ತಿಗಳನ್ನು ಪರಿಶೀಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ನಂತರ ಕೋರ್ಟ್, ಜಿಲ್ಲಾಧಿಕಾರಿಗಳಿಗೆ ನಿತ್ಯಾನಂದನ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ನೀಡಲಿದೆ.
ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ
ರಾಜ್ಯದ ಅನ್ನದಾತರಿಗೆ ಮುಂಗಾರು ಹಂಗಾಮಿನ ಸಮಯದಲ್ಲಿ ಎದುರಾಗುತ್ತಿದ್ದ ಬಹುದೊಡ್ಡ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಉದ್ದೇಶಪೂರ್ವಕವಾಗಿ...








