ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಕೊರೊನಾ ಸ್ಫೋಟವಾಗಿದ್ದು, ಇಂದು ಬರೋಬ್ಬರಿ 229 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಕಿಲ್ಲರ್ ಕೊರೊನಾಗೆ ಇಂದು 7 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಮಹಾಮಾರಿಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ ಒಟ್ಟು 244ಕ್ಕೇರಿದೆ. ಇಂದು ಮಂಗಳೂರು ತಾಲೂಕಿನ133 ಮಂದಿಗೆ ಕೊರೋನಾ ಪಾಸಿಟಿವ್, ಬಂಟ್ವಾಳ 45, ಪುತ್ತೂರು 22, ಬೆಳ್ತಂಗಡಿ 14, ಸುಳ್ಯ 5 ಹಾಗೂ ಹೊರ ಜಿಲ್ಲೆಯಿಂದ ಬಂದ 10 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇಂದು ಬರೋಬ್ಬರಿ 498 ಮಂದಿ ಗುಣಮುಖರಾಗಿದ್ದರೇ ಆಕ್ವೀವ್ ಕೇಸ್ 2,349 ಇದೆ. ಈವರೆಗೂ ಒಟ್ಟು 7,825 ಕೊರೋನಾ ಪಾಸಿಟಿವ್ ಕೇಸ್ ಗಳಿವೆ.
ನಾನು ಚುನಾವಣೆಗೆ ಸ್ಪರ್ಧಿಸಲ್ಲ ಯಾಕೆ ಗೊತ್ತಾ? ರಿಯಲ್ ಸ್ಟಾರ್ ಉಪೇಂದ್ರ ನೀಡಿದ ಉತ್ತರ ಕೇಳಿ ದಂಗಾದ ಅಭಿಮಾನಿಗಳು
ಕನ್ನಡ ಚಿತ್ರರಂಗದ ವಿಭಿನ್ನ ಆಲೋಚನೆಗಳ ಸರದಾರ ರಿಯಲ್ ಸ್ಟಾರ್ ಉಪೇಂದ್ರ ಅವರು ಪ್ರಜಾಕೀಯ ಎಂಬ ಹೊಸ ರಾಜಕೀಯ ಕ್ರಾಂತಿಗೆ ನಾಂದಿ ಹಾಡಿದ್ದಾರೆ. ಪ್ರಜಾಕೀಯ ಪಕ್ಷ ಸ್ಥಾಪನೆಯಾದಾಗಿನಿಂದಲೂ ಎಲ್ಲರ...








