ಕೊರೊನಾ ಮಾಹಮಾರಿಯ ವಿರುದ್ಧ ಹೋರಾಡಿ ಗೆದ್ದಿರುವ ಬಾಹುಬಲಿ ಖ್ಯಾತಿಯ ನಿರ್ದೇಶಕರಾದ ರಾಜಮೌಳಿ ಕುಟುಂಬ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ. ಸೋಂಕು ದೃಢವಾಗಿದ್ದ ಹಿನ್ನೆಲೆ 2 ವಾರಗಳ ಕಾಲ ರಾಜಮೌಳಿ ಪರಿವಾರದವರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಇದೀಗ ಕ್ವಾರೆಂಟೈನ್ ಅವಧಿಯನ್ನು ಪೂರ್ಣಗೊಳಿಸಿರುವ ರಾಜಮೌಳಿ ಕುಟುಂಬಸ್ಥರು ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜಮೌಳಿ ಅವರು ಇದೀಗ ನಾವೆಲ್ಲರೂ ಸಂಪೂರ್ಣವಾಗಿ ಗುಣಮುಖರಾಗಿದ್ದೇವೆ. “2 ವಾರಗಳ ಕ್ವಾರಂಟೈನ್ ಅವಧಿ ಮುಗಿದಿದೆ. ಯಾವುದೇ ರೋಗ ಲಕ್ಷಣಗಳಿಲ್ಲ. ಕೊರೊನಾ ಟೆಸ್ಟ್ ಮಾಡಿಸಿದ್ದು, ಎಲ್ಲರ ರಿಪೋರ್ಟ್ ನೆಗೆಟಿವ್ ಬಂದಿದೆ. ಆದರೆ ಪ್ಲಾಸ್ಮ ದಾನಮಾಡಲು ಇನ್ನೂ 3 ವಾರಗಳು ಕಾಯಬೇಕು ಎಂದು ವೈದ್ಯರು ಹೇಳಿದ್ದಾರೆ.” ಆದರೆ ಪ್ಲಾಸ್ಮ ದಾನಕ್ಕೆ ಇನ್ನೂ ಮೂರು ವಾರಗಳು ಕಾಯಬೇಕೆಂದು ಸೂಚಿಸಿರುವುದಾಗಿ ರಾಜಮೌಳಿ ಬರೆದುಕೊಂಡಿದ್ದಾರೆ.
ಮೋದಿಗೆ ಸಾಮಾನ್ಯ ಜ್ಞಾನವಿಲ್ಲ ತಿಲಕ ಇಡುವ ಕೇಸರಿ ಬರುವುದೂ ಮುಸ್ಲಿಂ ರಾಷ್ಟ್ರಗಳಿಂದಲೇ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ
ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನಿಷ್ಠ ಸಾಮಾನ್ಯ ಪ್ರಜ್ಞೆಯೂ ಇಲ್ಲ ಎಂದು ನೇರವಾಗಿ ಟೀಕಿಸಿದ್ದಾರೆ. ಅಲ್ಪಸಂಖ್ಯಾತರ...








