ಬೆಂಗಳೂರಿನ ಕೆ ಜಿ ಹಳ್ಳಿ ಡಿಜೆ ಹಳ್ಳಿ ಗಲಭೆ ಪ್ರಕರಣ ಇಡೀ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಇನ್ನೂ ಶಾಸಕರ ಮನೆಗೆ ಬೆಂಕಿ ಹಚ್ಚಿ ಪುಂಡರು ಪುಂಡಾಟ ಮೆರೆದಿದ್ದು, ಹಿಂಸಾಚಾರ ತಾರಕಕ್ಕೇರಿದ ಬೆನ್ನಲ್ಲೇ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗೋಲೀಬಾರ್ ನಡೆಸಬೇಕಾಯಿತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ಆರೋಪಿಗಳನ್ನು ಇಂದು ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರು ಪಡಿಸಲು ಪೊಲೀಸರು ಸಿದ್ದತೆ ನಡೆಸಿಕೊಂಡಿದ್ದಾರೆ. ಈಗಾಗಲೇ ಪ್ರಕರಣದಲ್ಲಿ 150 ಕ್ಕೂ ಹೆಚ್ಚು ಜನರನ್ನ ಪೊಲೀಸರು ಬಂಧಿಸಿದ್ದಾರೆ. ಅವರೆಲ್ಲರಿಗೂ ಕೋವಿಡ್ ಟೆಸ್ಟ್ ಮಾಡಿಸಲಿದ್ದಾರೆ. ಇನ್ನೂ 150 ಆರೋಪಿಗಳ ಪೈಕಿ ಕೆಲವು ಪ್ರಮುಖ ಆರೋಪಿಗಳನ್ನ ಗುರುತಿಸಿರುವ ಪೊಲಿಸರು ಅವರನ್ನು ಕಸ್ಟಡಿಗೆ ಪಡೆಯುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್ಲೈನ್ನಲ್ಲಿ ಚೆಕ್ ಮಾಡಿ
ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲಿಸಬಹುದಾಗಿದೆ. ಚುನಾವಣಾ ಆಯೋಗದ ಅಧಿಕೃತ ಪೋರ್ಟಲ್ನಲ್ಲಿ SIR-2026,...








