ರಾತ್ರೋರಾತ್ರಿ ರಾಜ್ಯವನ್ನೇ ಬೆಚ್ಚಿಬೀಳುವಂತೆ ಮಾಡಿದ್ದ ಡಿಜೆ ಹಳ್ಳಿ , ಕೆಜಿ ಹಳ್ಳಿ ಗಲಭೆ ಪ್ರಕರಣದ ತನಿಖೆ ಭರದಿಂದ ಸಾಗುತ್ತಿದೆ. ಈಗಾಗಲೇ ಪ್ರಕರಣ ಸಂಬಂಧ 150 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾತೆ. ಇನ್ನೂ ಕೆಜಿ ಹಳ್ಳಿ ಕಾಪೋರೇಟರ್ ಇರ್ಷಾದ್ ಬೇಗಂ ಪತಿ ಕಲೀಂ ಪಾಷ್ ನನ್ನು ಸಿಸಿಬಿ ದಾಳಿಯಲ್ಲಿ ಬಂಧಿಸಲಾಗಿದೆ. ಗಲಭೆ ದಿನ ಡಿಜೆ ಹಳ್ಳಿ ಪೊಲೀಸ್ ಠಾಣೆ ಉದ್ರಿಕ್ತರ ಜತೆ ಗಲಾಟೆ ಮಾಡಿದ ಕಲೀಂ ಪಾಷ್ ಘಟನೆ ಬಳಿಕ ಎಸ್ಕೇಪ್ ಆಗಿದ್ದ. ರಾತ್ರೋರಾತ್ರಿ ಫೀಲ್ಡಿಗಿಳಿದು 12 ಗಂಟೆಯಿಂದ ಮುಂಜಾನೆ 4 ಗಂಟೆವರೆಗೂ ಮಿಡ್ ನೈಟ್ ಅಪರೇಷನ್ ನಡೆಸಿದ ಪೊಲೀಸರು ಕಲೀಂ ಪಾಷ್ ನನ್ನು ಅರೆಸ್ಟ್ ಮಾಡಿದ್ದಾರೆ.
ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ
ಡಿಕೆ ಶಿವಕುಮಾರ್ ಅವರು ತುಮಕೂರನ್ನು 2ನೇ ಬೆಂಗಳೂರು ಆಗಿ ಅಭಿವೃದ್ಧಿಪಡಿಸುವ ಆಲೋಚನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನಲ್ಲಿ ಆಯೋಜಿಸಿದ್ದ...








