ಬೆಂಗಳೂರು: ವಿಧಾನಸೌಧದಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಬಜೆಟ್ ಮಂಡನೆ ಮಾಡುತ್ತಿದ್ದು, ಭಾಗ್ಯಲಕ್ಷ್ಮಿ, ಶಾಲಾ ಮಕ್ಕಳಿಗೆ ಸೈಕಲ್ ಸೇರಿದಂತೆ ಪ್ರಮುಖ ಯೋಜನೆಗಳನ್ನು ಮುಂದುವರೆಸಲಾಗುವುದು ಅಂತ ಹೇಳಿದರು. ಕೃಷಿಗಾಗಿ ಹೊಸ ಕೃಷಿ ನೀತಿ ಜಾರಿಗೆ ತರಲಾಗುತ್ತಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೇಂದ್ರ ಸರ್ಕಾರದ 6 ಸಾವಿರ ಜೊತೆಗೆ, ನಮ್ಮ ಸರ್ಕಾರ 4 ಸಾವಿರ ಘೋಷಿಸಿದೆ. ಈವರೆಗೆ 41 ಲಕ್ಷ ಬ್ಯಾಂಕ್ ಖಾತೆಗಳಿಗೆ 825 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಈ ಯೋಜನೆ ಮುಂದುವರೆಸಲು 2600 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಎಲ್ಲಾ ರೈತರಿಗೆ, ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎನ್ನುವ ಮೂಲಕ, ಸಿಎಂ ರಾಜ್ಯದ ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ನಾಡದ್ರೋಹಿ; ಡಿ.ಕೆ. ಶಿವಕುಮಾರ್
ಬೆಂಗಳೂರು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆಶಿ ಗುಡುಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ, ಕುಮಾರಸ್ವಾಮಿ ನಾಡದ್ರೋಹಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಈಗ...