ಬೆಂಗಳೂರು: ಡಿಜೆ ಹಳ್ಳಿ , ಕೆಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಪ್ರಮುಖವಾಗಿ ಎಸ್ ಡಿಪಿಐ ಮತ್ತು ಪಿಎಫ್ಐ ಸಂಘಟನೆಯ ಕೈವಾಡವಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಎಸ್.ಡಿ.ಪಿ.ಐ. ಮತ್ತು ಪಿಎಫ್ಐ ಸಂಘಟನೆಗಳ ನಿಷೇಧಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಿರುವುದಾಗಿ ಸಚಿವ ಆರ್ ಅಶೋಕ್ ಅವರು
ಮಾಹಿತಿ ನೀಡಿದ್ದಾರೆ.
ಇದೇ ವೇಳೆ ಮಾತು ಮುಂದುವರೆಸಿದ ಆರ್ ಅಶೋಕ್ ರಾಜ್ಯದಲ್ಲಿ ಯಾವುದೇ ದೇಶದ್ರೋಹಿ ಸಂಘಟನೆ ಇರಬಾರದು. ಮುಖ್ಯಮಂತ್ರಿಗಳು ಸೂಚನೆ ನೀಡಿದ ನಂತರ ಪಿಎಫ್ಐ ಮತ್ತು ಎಸ್.ಡಿ.ಪಿ.ಐ. ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಹೇಳಿದರು.
49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!
49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್ಲೈನ್ನಲ್ಲಿ ಊಟ ಆರ್ಡರ್...








