ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದ್ದ ನಿರ್ಭಯಾ ಸಾಮೂಹಿಕ ಅತ್ಯಾಚಾರ ಅಪರಾಧಿಗಳಿಗೆ ಕೊನೆಗೂ ಗಲ್ಲಿಗೇರಲು ಸಮಯ ಬಂದಂತೆ ತೋರುತ್ತಿದೆ.ದೆಹಲಿಯ ಪಟಿಯಾಲ ಕೋರ್ಟ್ ನಿರ್ಭಯಾ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಇಂದು ಹೊಸ ಡೆತ್ ವಾರಂಟ್ ಜಾರಿಗೊಳಿಸಿದೆ. ಇದೇ ಮಾರ್ಚ್ 20ರಂದು ಬೆಳಗ್ಗೆ 6 ಗಂಟೆಗೆ ನಾಲ್ವರು ಆರೋಪಿಗಳನ್ನು ನೇಣಿಗೇರಿಸಲು ಕೋರ್ಟ್, ಹೊಸ ಡೆತ್ ವಾರೆಂಟ್ ಗೆ ಆದೇಶ ನೀಡಿದೆ.
ದಿನಕ್ಕೊಂದು ಕಾರಣ ನೀಡುತ್ತಾ ಕಾನೂನಿನ ಮಾರ್ಗಗಳಿಂದ ತಪ್ಪಿಸಿಕೊಳ್ಳಲು ನೋಡಿದ ನಿರ್ಭಯಾ ಅತ್ಯಾಚಾರಿಗಳಿಗೆ ಈಗಾಗಲೇ ಮೂರು ಬಾರಿ ಡೆತ್ ವಾರೆಂಟ್ ನೀಡಲಾಗಿದೆ. ಅಪರಾಧಿಗಳಿಗೆ ಇರುವ ಎಲ್ಲಾ ಕಾನೂನು ಮಾರ್ಗಗಳನ್ನು ಅವರು ಬಳಸಿಕೊಂಡಿದ್ದು, ಇನ್ನು ಅವರಿಗೆ ಯಾವುದೇ ಅವಕಾಶವಿಲ್ಲದಂತಾಗಿದ್ದು, ಇದೀಗ ನಾಲ್ಕನೇ ಡೆತ್ ವಾರೆಂಟ್ ಜಾರಿಯಾಗಿದೆ.
ಆದರೂ ಕಾನೂನಿನ ಅಡಿಯಲ್ಲಿ ಯಾವ ಹೊಸ ನಾಟಕ ನಿರ್ಭಯಾ ರೇಪಿಸ್ಟ್ ಗಳ ಬತ್ತಳಿಕೆಯಲ್ಲಿದೆ ಎಂಬ ಕುತೂಹಲ ಜನರಲ್ಲಿದೆ.ಪಟಿಯಾಲ ಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ ಮಾಡಬಹುದಾಗಿದ್ದು, ಕೋರ್ಟ್ ಇವರ ನಾಟಕಕ್ಕೆ ಇತಿಶ್ರೀ ಹಾಡುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ
ರಾಜ್ಯ ಕಾಂಗ್ರೆಸ್ನಲ್ಲಿ ಮಹಾ “ರಾ” ಸ್ಫೋಟ: ಸಿದ್ದು ಬಣದ ವಿದೇಶ ಪ್ರವಾಸಕ್ಕೆ ಡಿಕೆಶಿ ರೆಸಾರ್ಟ್ ಪಾಲಿಟಿಕ್ಸ್ ಟಕ್ಕರ್? ಸಿಎಂ ಕುರ್ಚಿ ಕಾದಾಟಕ್ಕೆ ಬೆಚ್ಚಿಬಿದ್ದ ಹೈಕಮಾಂಡ್!
ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಮಹಾ ಹೈಡ್ರಾಮಾಕ್ಕೆ ವೇದಿಕೆ ಸಜ್ಜಾಗಿದೆ. ರಾಜ್ಯದ ಜನತೆ ಬರಗಾಲ, ಅಭಿವೃದ್ಧಿ ಕುಂಠಿತದಂತಹ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಿದ್ದರೆ, ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ...








