ಬೆಳಗಾವಿ : ಕುಂದಾನಗರಿ ಬೆಳಗಾವಿ ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದೆ. ಮಳೆಯ ಅರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಇತ್ತ ಜಿಲ್ಲೆಯ ನದಿ ದಡದಲ್ಲಿರುವ ಬಹುತೇಕ ಸೇತುವೆಗಳು ಮುಳುಗಡೆ ಹಂತ ತಲುಪಿದ್ದು, ಮಳೆರಾಯನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಹೆಚ್ಚಾದ ಪರಿಣಾಮ ನದಿ ಹಳ್ಳ ಕೊಳ್ಳಗಳು ಸಂಪೂರ್ಣ ಭರ್ತಿಯಾಗಿವೆ. ಮತ್ತೊಂದೆಡೆ ಬೈಲಹೊಂಗಲ ಮಾರ್ಗದ ಪಟ್ಟಿಹಾಳ ಕೆ.ಎಸ್. ಗ್ರಾಮದ ಸೇತುವೆ ಸಂಪೂರ್ಣ ಜಲಾವೃತವಾಗಿದ್ರೆ, ಇತ್ತ ಗ್ರಾಮದ ರಸ್ತೆಗಳು ಬಿರುಕುಬಿಟ್ಟಿದ್ದು, ಸಂಚರಿಸಲು ಜನರು ಭಯಪಡುವಂತಾಗಿದೆ. ಪಟ್ಟಿಹಾಳ ಕೆ.ಎಸ್ ಗ್ರಾಮದ ಹೊಲ ಗದ್ದೆ, ಸರಕಾರಿ ಶಾಲೆ, ದೇವಸ್ಥಾನಕ್ಕೂ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಇಷ್ಟೇ ಅಲ್ಲ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಜಿಲ್ಲೆಯ ಪಟ್ಟಿಹಾಳ ಕೆ.ಎಸ್, ಸಂಪಗಾಂವ, ಪಾರೀಶ್ವಾಡ, ಗದ್ದಿ ಕರವಿನಕೊಪ್ಪ, ಎಂ.ಕೆ.ಹುಬ್ಬಳ್ಳಿ, ಹಿರೇ ಮುನ್ನವಳ್ಳಿ, ಸವದತ್ತಿಯ ವಿವಿಧೆಡೆ ಸೇತುವೆಗಳು ಜಲಾವೃತಗೊಂಡಿವೆ.
ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...








