ಬೆಳಗಾವಿ : ಕುಂದಾನಗರಿ ಬೆಳಗಾವಿ ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದೆ. ಮಳೆಯ ಅರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಇತ್ತ ಜಿಲ್ಲೆಯ ನದಿ ದಡದಲ್ಲಿರುವ ಬಹುತೇಕ ಸೇತುವೆಗಳು ಮುಳುಗಡೆ ಹಂತ ತಲುಪಿದ್ದು, ಮಳೆರಾಯನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಹೆಚ್ಚಾದ ಪರಿಣಾಮ ನದಿ ಹಳ್ಳ ಕೊಳ್ಳಗಳು ಸಂಪೂರ್ಣ ಭರ್ತಿಯಾಗಿವೆ. ಮತ್ತೊಂದೆಡೆ ಬೈಲಹೊಂಗಲ ಮಾರ್ಗದ ಪಟ್ಟಿಹಾಳ ಕೆ.ಎಸ್. ಗ್ರಾಮದ ಸೇತುವೆ ಸಂಪೂರ್ಣ ಜಲಾವೃತವಾಗಿದ್ರೆ, ಇತ್ತ ಗ್ರಾಮದ ರಸ್ತೆಗಳು ಬಿರುಕುಬಿಟ್ಟಿದ್ದು, ಸಂಚರಿಸಲು ಜನರು ಭಯಪಡುವಂತಾಗಿದೆ. ಪಟ್ಟಿಹಾಳ ಕೆ.ಎಸ್ ಗ್ರಾಮದ ಹೊಲ ಗದ್ದೆ, ಸರಕಾರಿ ಶಾಲೆ, ದೇವಸ್ಥಾನಕ್ಕೂ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಇಷ್ಟೇ ಅಲ್ಲ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಜಿಲ್ಲೆಯ ಪಟ್ಟಿಹಾಳ ಕೆ.ಎಸ್, ಸಂಪಗಾಂವ, ಪಾರೀಶ್ವಾಡ, ಗದ್ದಿ ಕರವಿನಕೊಪ್ಪ, ಎಂ.ಕೆ.ಹುಬ್ಬಳ್ಳಿ, ಹಿರೇ ಮುನ್ನವಳ್ಳಿ, ಸವದತ್ತಿಯ ವಿವಿಧೆಡೆ ಸೇತುವೆಗಳು ಜಲಾವೃತಗೊಂಡಿವೆ.
ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...








