ಬೆಳಗಾವಿ: ಬೆಳಗಾವಿಯಲ್ಲಿ ಜಿಲ್ಲಿಯಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ವರುಣನ ಆರ್ಭಟಕ್ಕೆ ಜಿಲ್ಲೆಯ ಜನರು ಹೈರಾಣಾಗಿ ಹೋಗಿದ್ದಾರೆ. ಹಲವೆಡೆ ಮಹಾಮಳೆಗೆ ಅವಾಂತರಗಳು ಸೃಷ್ಟಿಯಾಗಿವೆ. ಇತ್ತ ಬಿಟ್ಟು ಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಮನೆಗಳು ಧರೆಗುರುಳಿದ್ದು, ಕುಟುಂಬಸ್ಥರು ಕಂಗಾಲಾಗಿದ್ದಾರೆ. ಗ್ರಾಮದ ರುದ್ರಪ್ಪ ಕುಂಬಳಿ ಮತ್ತು ಬಸಲಿಂಗಪ್ಪ ಕುಂಬಳಿ ಎಂಬುವವರಿಗೆ ಸೇರಿದ ಮನೆಗಳು ಬಿದ್ದಿವೆ. ಇತ್ತ ಹಾನಿಗೊಳಗಾದ ಮನೆಯಲ್ಲೇ ಕುಟುಂಬಸ್ಥರು ಜೀವ ಕೈಯ್ಯಲ್ಲಿ ಹಿಡಿದು ಕಾಲ ಕಳೆಯುತ್ತಿದ್ದಾರೆ.
SIR ಕರಡು ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರು ಇದೆಯೇ ಎಂದು ಆನ್ಲೈನ್ನಲ್ಲಿ ಚೆಕ್ ಮಾಡಿ
ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗದ ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲಿಸಬಹುದಾಗಿದೆ. ಚುನಾವಣಾ ಆಯೋಗದ ಅಧಿಕೃತ ಪೋರ್ಟಲ್ನಲ್ಲಿ SIR-2026,...








