ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಪೌರಾಣಿಕವಾಗಿಯೂ ಶ್ರೇಷ್ಟ, ಧಾರ್ಮಿಕ ನಂಬಿಕೆಯಲ್ಲಿ ಉಚ್ಛ ಸ್ಥಾನ ಪಡೆದ ಅಶೋಕ ವೃಕ್ಷದ ಆಯುರ್ವೇದಿಕ್ ಮಹತ್ವ ನಿಮಗೆಷ್ಟು ಗೊತ್ತು?

admin by admin
August 18, 2020
in Health, Newsbeat, ಆರೋಗ್ಯ
Share on FacebookShare on TwitterShare on WhatsappShare on Telegram

ಪೌರಾಣಿಕವಾಗಿಯೂ ಶ್ರೇಷ್ಟ, ಧಾರ್ಮಿಕ ನಂಬಿಕೆಯಲ್ಲಿ ಉಚ್ಛ ಸ್ಥಾನ ಪಡೆದ ಅಶೋಕ ವೃಕ್ಷದ ಆಯುರ್ವೇದಿಕ್ ಮಹತ್ವ ನಿಮಗೆಷ್ಟು ಗೊತ್ತು?

ಅಶೋಕ ಹಿಂದೂ ಸಂಸ್ಕೃತಿಯಲ್ಲಿ ಒಂದು ಪರಮಪಾವನ ವೃಕ್ಷ. ರಾವಣ ಸೀತಾಮಾತೆಯನ್ನು ಅಪಹರಿಸಿ ಈ ಅಶೋಕ ವೃಕ್ಷಗಳಿಂದ ಕೂಡಿದ ವನದಲ್ಲಿಯೇ ಅಡಗಿಸಿಟ್ಟಿದ್ದನಂತೆ. ಕಾಳಿದಾಸನ ಕಾಲದಲ್ಲಂತೂ ಈ ಮರಕ್ಕೆ ಇನ್ನಿಲ್ಲದ ಪ್ರಾಶಸ್ತ್ಯ ದೊರೆತಿದೆ. ವಸಂತಕಾಲದಲ್ಲಿ ಒಂದು ನಿಶ್ಚಿತ ದಿನದಂದು ಯುವತಿಯೊಬ್ಬಳು ತನ್ನ ಎಡಗಾಲಿನಿಂದ ಮೃದುವಾಗಿ ಅಶೋಕವೃಕ್ಷವನ್ನು ಒದ್ದರೆ ಆ ಮರದಲ್ಲಿ ಗರ್ಭಾಂಕುರವಾಗುತ್ತಿತ್ತೆಂದು ಭೋಜರಾಜನ ಸರಸ್ವತೀ ಕಂಠಾಭರಣ, ಕಾಳಿದಾಸನ ಮಾಲವಿಕಾಗ್ನಿಮಿತ್ರ, ಹರ್ಷನ ರತ್ನಾವಳೀ ಗ್ರಂಥಗಳಲ್ಲಿ ಹೇಳಲಾಗಿದೆ. ಚೈತ್ರ ಶುಕ್ಲ ಅಷ್ಟಮಿಯಂದು ವ್ರತ ಮಾಡಿ ಅಶೋಕದ ಎಂಟು ಎಲೆಗಳನ್ನು ತಿಂದರೆ ಸ್ತ್ರೀಯರಿಗೆ ಸಂತಾನ ಪ್ರಾಪ್ತಿಯಾಗುವುದೆಂಬ ನಂಬಿಕೆ ಇದೆ. ಇನ್ನು ಗೌತಮ ಬುದ್ಧನೂ ಸಹ ಅಶೋಕವನದಲ್ಲಿಯೇ ಜನಿಸಿದ್ದನೆಂಬ ಪ್ರತೀತಿ ಇದೆ. ಹೀಗಾಗಿ ಬೌದ್ಧವಿಹಾರಗಳಲ್ಲಿ ಈ ಮರಗಳಿಗೆ ವಿಶೇಷ ಪ್ರಾಧಾನ್ಯತೆ ಇರುತ್ತದೆ.

Related posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026
ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

August 7, 2026

ಅಶೋಕ ನಿಧಾನವಾಗಿ ಬೆಳೆಯುವ ನಿತ್ಯ ಹಸಿರಿನ ಮರ. ನೀಳವಾಗಿ ಚೂಪಾಗಿರುವ ಎಲೆಗಳಿಂದ ಕೂಡಿದ ಮರದ ತುಂಬಾ ಗೊಂಚಲು ಗೊಂಚಲು ಹೂಗಳಿರುತ್ತವೆ. ಈ ಗಿಡದ ಕಾಯಿಗಳು ಕಂದು ಬಣ್ಣದವಾಗಿರುತ್ತವೆ. ಹತ್ತು ಸೆಂಟಿಮೀಟರ್ ಉದ್ದವಾಗಿರುವ ಕಾಯಿಗಳ ಒಳಗಡೆ ಸಾಲಾಗಿ ಬೀಜಗಳಿರುತ್ತವೆ. ಈ ಮರಗಳು ಈಶಾನ್ಯ ಭಾರತದ ಕಾಡುಗಳಲ್ಲಿ ಹಾಗೂ ಕರ್ನಾಟಕದಲ್ಲಿ ಹೇರಳವಾಗಿ ಕಂಡುಬರುತ್ತವೆ. ಗಂಧಪುಷ್ಪ, ಹೇಮಪುಷ್ಪ, ಪಿಂಡಪುಷ್ಪ, ತಾಮ್ರಪುಷ್ಪ, ಶಂಕೇಲಿ, ರಕ್ತಪಲ್ಲವ ಇವು ಅಶೋಕದ ಪರ್ಯಾಯ ಪದಗಳು.

ಸಸ್ಯಶಾಸ್ತ್ರದಲ್ಲಿ ಅಶೋಕ ಮರಕ್ಕೆ ಸೆರೆಕಾ ಇಂಡಿಕಾ ಎಂಬ ಹೆಸರಿದೆ. ಹೆಸರೇ ಹೇಳುವಂತೆ ಅಶೋಕ ಎಂದರೆ ಶೋಕವಿಲ್ಲದ್ದು ಎಂಬ ಅರ್ಥವಿದೆ. ಚರಕ ಸಂಹಿತೆಯಲ್ಲಿ ಅಶೋಕವೃಕ್ಷದ ಔಷಧೀಯ ಗುಣಗಳ ಉಲ್ಲೇಖವಿದೆ. ಮರದ ತೊಗಟೆ, ಹೂ, ಬೀಜಗಳನ್ನು ಒಣಗಿಸಿ, ಪುಡಿ ಮಾಡಿ ಬಳಸುತ್ತಾರೆ. ಅಶೋಕಾರಿಷ್ಟ, ಅಶೋಕಘೃತ ಎಂಬ ಔಷಧಿಗಳನ್ನು ನಾವು ಆಯುರ್ವೇದದ ಅಂಗಡಿಗಳಲ್ಲಿ ಕಾಣಬಹುದು. ತೊಗಟೆಯಲ್ಲಿ ಟ್ಯಾನಿನ್ ಅಂಶವಿರುತ್ತದೆ. ತೊಗಟೆಯ ಪುಡಿಯನ್ನು ಸ್ವಲ್ಪ ಚಹಾದೊಂದಿಗೆ ಸೇರಿಸುವುದರಿಂದ ಚಹಾದ ರುಚಿ ಹಾಗೂ ಬಣ್ಣದಲ್ಲಿ ಹೆಚ್ಚಳವಾಗುವುದು.

ಅಶೋಕ ಚಕ್ಕೆಯು ಸ್ತ್ರೀಯರ ಆರೋಗ್ಯದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಅಶೋಕ ಮರದ ಚಕ್ಕೆಯ ಪುಡಿಯನ್ನು ತುಪ್ಪದ ಜೊತೆ ಬೆರೆಸಿ ಸೇವಿಸುವುದರಿಂದ ಗರ್ಭಾಂಗಗಳು ದಷ್ಟಪುಷ್ಟವಾಗುತ್ತದೆ. ಅಶೋಕವೃಕ್ಷದ ಬೀಜವನ್ನು 3 ರಿಂದ 6 ಗ್ರಾಂ ನಷ್ಟು ಬಿಸಿನೀರು ಅಥವಾ ಹಾಲಿನಲ್ಲಿ ಸೇವಿಸುವುದರಿಂದ ಮೂತ್ರ ಕಲ್ಲು, ಮೂತ್ರ ಮಾಡುವಾಗ ಉಂಟಾಗುವ ತೊಂದರೆಗಳ ನಿವಾರಣೆಯಾಗುತ್ತದೆ. ಅಶೋಕ ಚೂರ್ಣ, ಜೀರಿಗೆ ಪುಡಿ, ಕಲ್ಲುಸಕ್ಕರೆಯನ್ನು ನೀರಿನಲ್ಲಿ ಮಿಶ್ರಣ ಮಾಡಿ ಕುಡಿಯುವುದರಿಂದ ರಕ್ತಪಿತ್ತ ರೋಗವು ನಿವಾರಣೆಯಾಗುತ್ತದೆ. ಅಶೋಕ ಚಕ್ಕೆಯ ಕಷಾಯ ಅಥವಾ ಪುಡಿಯನ್ನು ಸೇವಿಸುವುದರಿಂದ ರಕ್ತಮೂಲವ್ಯಾಧಿ ನಿವಾರಣೆಯಾಗುತ್ತದೆ. ಅಶೋಕ ವೃಕ್ಷದ ಹೂವುಗನ್ನು ನುಣ್ಣಗೆ ಅರೆದು ಕೊಬ್ಬರಿ ಎಣ್ಣೆಯಲ್ಲಿ ಕುದಿಸಿ, ಬರುವ ಎಣ್ಣೆಯನ್ನು ಚರ್ಮಕ್ಕೆ ಹಚ್ಚುವುದರಿಂದ ಚರ್ಮರೋಗಕ್ಕೆ ಒಳ್ಳೆಯದು.

ಮಾಹಿತಿ ಮತ್ತು ಲೇಖನ:- ಅಂಬಿಕಾ ಸೀತೂರು

Tags: # Ashoka Tree#Ashoka#ayurvedic significance#Hindu culture.#saakshatv#saakshatv.combengaluruhindukarnataka
ShareTweetSendShare
Join us on:

Related Posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram