ತುಮಕೂರು : ಕಾರು ಮತ್ತು ಟವೇರಾ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ 13 ಮಂದಿ ಮೃತಪಟ್ಟಿರುವ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಬಳಿ ನಡೆದಿದೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಅಮೃತೂರು ಠಾಣಾ ಪೊಲೀಸರು ಭೇಟಿ ನೀಡಿ ಮೃತ ದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಬ್ಯಾಲದ ಕೆರೆ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಎದುರಿಗೆ ಬರುತ್ತಿದ್ದ ಟವೇರಾ ವಾಹನಕ್ಕೆ ಗುದ್ದಿದೆ. ಪರಿಣಾಮ ಟವೇರಾದಲ್ಲಿದ್ದ 9 ಹಾಗೂ ಕಾರಿನಲ್ಲಿದ್ದ 3 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಟವೇರಾದಲ್ಲಿದ್ದ ಪ್ರಯಾಣಿಕರು ತಮಿಳುನಾಡಿನ ಹೊಸೂರಿನವರಾಗಿದ್ದು, ಧರ್ಮಸ್ಥಳ ಪ್ರವಾಸ ಮುಗಿಸಿ ಹೊಸೂರಿಗೆ ವಾಪಸ್ ಆಗುವಾಗ ಅಪಘಾತ ಸಂಭವಿಸಿದೆ.
Bng – ವೈಟ್ಫೀಲ್ಡ್ನ ಪಾರ್ಸೆಕ್ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!
• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...








