ಡಿಜೆ ಹಳ್ಳಿ – ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಈಗಾಗಲೇ ವಿಚಾರಣೆಗೊಳಪಟ್ಟಿದ್ದ ಮಾಜಿ ಮೇಯರ್ ಸಂಪತ್ ರಾಜ್ ಗೆ ಇದೀಗ ಮತ್ತೊಂದು ಶಾಕ್ ಆಗಿದೆ. ಹೌದು ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿ ಮುಜಾಮಿಲ್ ಜೊತೆ ಸಂಪರ್ಕ ಹೊಂದಿದ್ದ ಸಂಪತ್ ರಾಜ್ ಅವರ ಆಪ್ತನಾದ ಅರುಣ್ ನನ್ನ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಆರೋಪಿ ಜೊತೆಗೆ ಸಂಪರ್ಕವಿದ್ದ ಮಾಹಿತಿ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಪ್ರಕರದಲ್ಲಿ ಭಾಗಿಯಾಗಿದ್ದ ಬಗ್ಗೆ ಸಾಕ್ಷ್ಯ ಲಭ್ಯವಾಗಿದೆ. ಈ ಹಿನ್ನೆಲೆ ಅರುಣ್ ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಆತನನ್ನು 11 ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಲಿದ್ದು, ಅರುಣ್ ಬಂಧನದಿಂದ ಸಂಪತ್ ರಾಜ್ ಅವರಿಗೂ ತಲೆನೋವು ಶುರುವಾಗಿದೆ ಎಂಬ ಚರ್ಚೆಗಳು ಕೇಳಿಬರುತ್ತಿವೆ.