ನವದೆಹಲಿ: ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ದೆಹಲಿ ಗಲಭೆಯನ್ನು ಮುಂದಿಟ್ಟುಕೊಂಡು ವಿಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ ಎರಡೂ ಸದನಗಳ ಕಲಾಪವನ್ನು ಮತ್ತೆ ಮುಂದೂಡಲಾಗಿದೆ.
ಲೋಕಸಭೆಯಲ್ಲಿ ಇಂದು ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷಗಳು ದೆಹಲಿ ಗಲಭೆ ವಿಚಾರವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಇದರಿಂದ ಸದನದಲ್ಲಿ ಗದ್ದಲ ಸೃಷ್ಟಿ ಆಯಿತು. ಈ ಕೋಲಾಹಲದ ನಡುವೆ ಖನಿಜ ಕಾನೂನು ಮಸೂದೆ ಅಂಗೀಕಾರಗೊಂಡಿದ್ದು, ಕಲಾಪವನ್ನು ಮಾರ್ಚ್ 11ಕ್ಕೆ ಮುಂದೂಡಲಾಗಿದೆ. ಈ ಮಸೂದೆಯಲ್ಲಿ ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ, 1957 ಮತ್ತು ಕಲ್ಲಿದ್ದಲು ಗಣಿಗಾರಿಕೆ (ವಿಶೇಷ ನಿಬಂಧನೆಗಳು)ಕಾಯ್ದೆಗೆ ತಿದ್ದುಪಡಿಗಳನ್ನು ತರಲಾಗಿದೆ. ಕಲ್ಲಿದ್ದಲು ಗಣಿ ಹರಾಜಿನಲ್ಲಿ ಭಾಗವಹಿಸುವುದಕ್ಕೆ ನಿರ್ಬಂಧಗಳನ್ನು ತೆಗೆದುಹಾಕಲು ಮಸೂದೆ ಪ್ರಸ್ತಾಪಿಸಿದೆ ಮತ್ತು ಇದು ಎಲ್ಲಾ ದೇಶೀಯ ಮತ್ತು ಜಾಗತಿಕ ಕಂಪನಿಗಳಿಗೆ ವಾಣಿಜ್ಯ ಗಣಿಗಾರಿಕೆಗಾಗಿ ಕಲ್ಲಿದ್ದಲು ವಲಯವನ್ನು ಸಂಪೂರ್ಣವಾಗಿ ಮುಕ್ತಗೊಳಿಸುತ್ತದೆ.
ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ
ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...








