ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರವನ್ನು ದರಿದ್ರ ಸರ್ಕಾರವೆಂದು ಜರಿದ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಚಿವ ರಮೇಶ್ ಜಾರಕಿಹೊಳಿ “ಕಾಮಾಲೆಯಾದವರಿಗೆ ಎಲ್ಲವೂ ಹಳದಿ ಕಾಣುತ್ತದೆ. ಅದಕ್ಕೆ ಏನೂ ಮಾಡಲಾಗದು” ಎಂದು ತಿರುಗೇಟು ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಆರ್ಥಿಕ ಮುಗ್ಗಟ್ಟಿನ ಪರಿಸ್ಥಿತಿಯಲ್ಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉತ್ತಮ ಬಜೆಟ್ ಮಂಡಿಸಿದ್ದಾರೆ. ಕೃಷ್ಣಾ ನೀರಾವರಿ ಯೋಜನೆಗಳಿಗೆ 7 ಸಾವಿರ ಕೋಟಿ ಕೇಳಿದ್ವಿ. 10 ಸಾವಿರ ಕೋಟಿ ನೀಡಿದ್ದಾರೆ. ರೈತರು ಹಾಗೂ ಕಾರ್ಮಿಕರ ಅಭಿವೃದ್ಧಿಗಾಗಿ ಹೆಚ್ಚಿನ ಹಣವನ್ನೂ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿ ಪರವಾದ ಬಜೆಟ್ ಮಂಡಿಸಿದ್ದಾರೆ’ ಎಂದು ಪ್ರಶಂಶಿಸಿದರು.
ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!
ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...








